
ಬಳ್ಳಾರಿ, 27 ಮೇ (ಹಿ.ಸ.) :
ಆ್ಯಂಕರ್ : ಸ್ವತಂತ್ರ ಭಾರತದ ಮೊದಲ ಪ್ರಧಾನಿ, ನವ ಭಾರತ ನಿರ್ಮಾತೃ, ಭಾರತ ರತ್ನ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಪುಣ್ಯ ಸ್ಮರಣೆಯನ್ನು ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಚರಿಸಲಾಯಿತು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕಲ್ಲುಕಂಭ ಪಂಪಾಪತಿ, ಮಹಮ್ಮದ್ ಗೌಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುಮಾಯೂನ್ ಖಾನ್, ಡಿಸಿಸಿ ಕಾರ್ಯಾಧ್ಯಕ್ಷರಾದ ಭೋಯಪಾಟಿ ವಿಷ್ಣುವರ್ಧನ್, ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಕೆ.ಇ. ಚಿದಾನಂದಪ್ಪ, ಡಿಸಿಸಿ ಉಪಾಧ್ಯಕ್ಷರಾದ ಶ್ರೀನಿವಾಸುಲು, ಡಿಸಿಸಿ ಉಪಾಧ್ಯಕ್ಷರಾದ ಕೆ. ಶ್ರೀನಿವಾಸುಲು, ಪ್ರಚಾರ ಸಮಿತಿಯ ಜಿಲ್ಲಾ ನಗರ ಅಧ್ಯಕ್ಷರಾದ ಈರನ್ನಗೌಡ, ಸೇವದಾಳ ಜಿಲ್ಲಾ ನಗರ ಅಧ್ಯಕ್ಷರು ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್