ಹಲವು ರೈಲುಗಳ ಸಂಚಾರದಲ್ಲಿ ನಿಯಂತ್ರಣ, ಮಾರ್ಗ ಬದಲಾವಣೆ
ಹುಬ್ಬಳ್ಳಿ, 29 ಮೇ (ಹಿ.ಸ.) : ಆ್ಯಂಕರ್ : ದಾವಣಗೆರೆ ರೈಲು ನಿಲ್ದಾಣದ ಯಾರ್ಡ್ ಪ್ರದೇಶದಲ್ಲಿ ಪಾದಚಾರಿ ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ಹಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಘೋಷಿಸಿದೆ. ಕಾಮಗಾರಿ ಅವಧಿಯಲ್ಲಿ ಕೆಲವು ರೈಲು
ಹಲವು ರೈಲುಗಳ ಸಂಚಾರದಲ್ಲಿ ನಿಯಂತ್ರಣ, ಮಾರ್ಗ ಬದಲಾವಣೆ


ಹುಬ್ಬಳ್ಳಿ, 29 ಮೇ (ಹಿ.ಸ.) :

ಆ್ಯಂಕರ್ : ದಾವಣಗೆರೆ ರೈಲು ನಿಲ್ದಾಣದ ಯಾರ್ಡ್ ಪ್ರದೇಶದಲ್ಲಿ ಪಾದಚಾರಿ ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ಹಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಘೋಷಿಸಿದೆ.

ಕಾಮಗಾರಿ ಅವಧಿಯಲ್ಲಿ ಕೆಲವು ರೈಲುಗಳನ್ನು ಮಾರ್ಗಮಧ್ಯೆ ನಿಯಂತ್ರಿಸಲಾಗಿದ್ದು, ಕೆಲವು ರೈಲುಗಳಿಗೆ ಮರು-ವೇಳಾಪಟ್ಟಿ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿದೆ.

ನಿಯಂತ್ರಣಕ್ಕೆ ಒಳಪಡುವ ರೈಲುಗಳು : ಮೇ 30, 2026 ರಿಂದ ಜೂನ್ 8, 2026 ರವರೆಗೆ ವಾಸ್ಕೋ-ಡ-ಗಾಮಾದಿಂದ ಸಂಚರಿಸುವ ರೈಲು ಸಂಖ್ಯೆ 17310 ವಾಸ್ಕೋ-ಡ-ಗಾಮಾ – ಯಶವಂತಪುರ ದೈನಂದಿನ ಎಕ್ಸ್ಪ್ರೆಸ್ ರೈಲನ್ನು ಮಾರ್ಗಮಧ್ಯೆ 100 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಜೂನ್ 1, 2026 ರಂದು ಉದಯಪುರ ಸಿಟಿಯಿಂದ ಹೊರಡುವ ರೈಲು ಸಂಖ್ಯೆ 19667 ಉದಯಪುರ ಸಿಟಿ – ಮೈಸೂರು ಹಮ್ಸಫರ್ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲನ್ನು ಮಾರ್ಗಮಧ್ಯೆ 120 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಮೇ 31, 2026 ರಿಂದ ಜೂನ್ 9, 2026 ರವರೆಗೆ ಧಾರವಾಡದಿಂದ ಹೊರಡುವ ರೈಲು ಸಂಖ್ಯೆ 12726 ಧಾರವಾಡ – ಕೆಎಸ್ಆರ್ ಬೆಂಗಳೂರು ಸಿದ್ದಗಂಗಾ ದೈನಂದಿನ ಎಕ್ಸ್ಪ್ರೆಸ್ ರೈಲನ್ನು 50 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಮೇ 31, 2026 ರಿಂದ ಜೂನ್ 9, 2026 ರವರೆಗೆ ಅರಸೀಕೆರೆ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16213 ಅರಸೀಕೆರೆ – ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಎಕ್ಸ್ಪ್ರೆಸ್ ರೈಲನ್ನು 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಮರು-ವೇಳಾಪಟ್ಟಿ : ಮೇ 31, 2026 ರಿಂದ ಜೂನ್ 9, 2026 ರವರೆಗೆ ರೈಲು ಸಂಖ್ಯೆ 12614 ಕೆಎಸ್ಆರ್ ಬೆಂಗಳೂರು – ಮೈಸೂರು ಒಡೆಯರ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ ತನ್ನ ನಿಗದಿತ ವೇಳೆಗೆ ಹೋಲಿಸಿದರೆ 20 ನಿಮಿಷ ತಡವಾಗಿ ಹೊರಡಲಿದೆ.

ಮಾರ್ಗ ಬದಲಾವಣೆ : ಮೇ 31, 2026 ರಿಂದ ಜೂನ್ 9, 2026 ರವರೆಗೆ ರೈಲು ಸಂಖ್ಯೆ 56529 ಹರಿಹರ – ಹೊಸಪೇಟೆ ಪ್ಯಾಸೆಂಜರ್ ರೈಲು ಹರಿಹರ, ಅಮರಾವತಿ ಕಾಲೋನಿ ಹಾಗೂ ತೆಲಿಗಿ ಮಾರ್ಗವಾಗಿ ಸಂಚರಿಸಲಿದೆ.

ಈ ಹಿನ್ನೆಲೆಯಲ್ಲಿ ದಾವಣಗೆರೆ ಮತ್ತು ತೋಳಹುಣಸೆ ನಿಲ್ದಾಣಗಳಲ್ಲಿ ಈ ರೈಲಿಗೆ ತಾತ್ಕಾಲಿಕ ನಿಲುಗಡೆ ಇರುವುದಿಲ್ಲ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande