
ನವದೆಹಲಿ, 30 ಮೇ (ಹಿ.ಸ.) :
ಆ್ಯಂಕರ್ : ಗೋವಾ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗೋವಾ ರಾಜ್ಯದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂದೇಶ ಪ್ರಕಟಿಸಿರುವ ರಾಷ್ಟ್ರಪತಿಗಳು, ಗೋವಾ ತನ್ನ ಸಮೃದ್ಧ ಸಾಂಸ್ಕೃತಿಕ ಪರಂಪರೆ, ಆತ್ಮೀಯ ಆತಿಥ್ಯ ಮತ್ತು ವೈವಿಧ್ಯಮಯ ಸಂಸ್ಕೃತಿಗೆ ಹೆಸರುವಾಸಿಯಾಗಿದೆ ಎಂದು ಹೇಳಿದ್ದಾರೆ.
ಶಿಕ್ಷಣ, ತಂತ್ರಜ್ಞಾನ, ನವೋದ್ಯಮ ಹಾಗೂ ಸುಸ್ಥಿರ ಅಭಿವೃದ್ಧಿಯ ಕ್ಷೇತ್ರಗಳಲ್ಲಿ ಗೋವಾ ಸಾಧಿಸಿರುವ ಗಮನಾರ್ಹ ಪ್ರಗತಿಯನ್ನು ಅವರು ಶ್ಲಾಘಿಸಿದ್ದಾರೆ.
ನಾವೀನ್ಯತೆ, ಪರಿಸರ ಸಂರಕ್ಷಣೆ ಮತ್ತು ಸಮಗ್ರ ಬೆಳವಣಿಗೆಯತ್ತ ರಾಜ್ಯವು ತೋರಿರುವ ಬದ್ಧತೆ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
‘ವಿಕ್ಷಿತ್ ಭಾರತ’ ನಿರ್ಮಾಣದ ಸಂಕಲ್ಪ ಸಾಕಾರಗೊಳಿಸುವಲ್ಲಿ ಗೋವಾ ಪ್ರಮುಖ ಪಾತ್ರ ವಹಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿರುವ ರಾಷ್ಟ್ರಪತಿಗಳು, ರಾಜ್ಯದ ಜನತೆಗೆ ನಿರಂತರ ಸಮೃದ್ಧಿ, ಅಭಿವೃದ್ಧಿ ಹಾಗೂ ಸಂತೋಷ ಲಭಿಸಲಿ ಎಂದು ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.