
ಧಾರವಾಡ, 07 ಮೇ (ಹಿ.ಸ.):
ಆ್ಯಂಕರ್:
ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಕೇಂದ್ರ ಕಛೇರಿ ವತಿಯಿಂದ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಪ್ರಯುಕ್ತ ಮಕ್ಕಳು ರಚಿಸಿದ ಮತ್ತು ಪ್ರಕಟಣೆಗೊಂಡ ಪುಸ್ತಕಗಳನ್ನು ಅಹ್ವಾನಿಸಲಾಗಿದೆ.
ಆಸಕ್ತ ಮಕ್ಕಳು, ತಮ್ಮ ಸ್ವವಿವರಗಳನ್ನು ಒಳಗೊಂಡ ಬರಹದೊಂದಿಗೆ ಪ್ರಕಟಿತ ತಮ್ಮ ಪುಸ್ತಕವನ್ನು ಮೇ 16, 2026 ರೊಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿ ಧಾರವಾಡ ವಿಳಾಸಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2465490 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa