ಭಯೋತ್ಪಾದನೆ ವಿರುದ್ಧ ಭಾರತಕ್ಕೆ ಆತ್ಮರಕ್ಷಣೆಯ ಹಕ್ಕು: ವಿದೇಶಾಂಗ ಸಚಿವಾಲಯ
ನವದೆಹಲಿ, 07 ಮೇ (ಹಿ.ಸ.): ಆ್ಯಂಕರ್: ಆಪರೇಷನ್ ಸಿಂಧೂರ್‌ನ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ವಿದೇಶಾಂಗ ಸಚಿವಾಲಯವು ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಪಾಕಿಸ್ತಾನವು ಭಯೋತ್ಪಾದನೆಯನ್ನು ತನ್ನ ರಾಜ್ಯ ನೀತಿಯ ಭಾಗವಾಗಿ ಬಳಸುತ್ತಿದೆ ಎಂದು ಆರೋಪಿಸಿದೆ. ಭಯೋತ್ಪಾದನೆಯಿಂದ ತ
ರಣಧೀರ್ ಜೈಸ್ವಾಲ್


ನವದೆಹಲಿ, 07 ಮೇ (ಹಿ.ಸ.):

ಆ್ಯಂಕರ್:

ಆಪರೇಷನ್ ಸಿಂಧೂರ್‌ನ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ವಿದೇಶಾಂಗ ಸಚಿವಾಲಯವು ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಪಾಕಿಸ್ತಾನವು ಭಯೋತ್ಪಾದನೆಯನ್ನು ತನ್ನ ರಾಜ್ಯ ನೀತಿಯ ಭಾಗವಾಗಿ ಬಳಸುತ್ತಿದೆ ಎಂದು ಆರೋಪಿಸಿದೆ. ಭಯೋತ್ಪಾದನೆಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಸಂಪೂರ್ಣ ಹಕ್ಕು ಭಾರತಕ್ಕೆ ಇದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಇಡೀ ವಿಶ್ವವೇ ಕಂಡಿದೆ. ಆ ದಾಳಿಗೆ ಭಾರತವು ಸೂಕ್ತ ಮತ್ತು ದೃಢ ಪ್ರತಿಕ್ರಿಯೆ ನೀಡಿದೆ ಎಂದು ಹೇಳಿದರು.

ಭಾರತವು ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ಬಲಪಡಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗಳನ್ನು ಭಾರತ ಸಹಿಸುವುದಿಲ್ಲ ಎಂದು ಅವರು ಹೇಳಿದರು.

ಸಿಂಧೂ ನದಿ ನೀರು ಒಪ್ಪಂದದ ವಿಚಾರದಲ್ಲಿಯೂ ವಿದೇಶಾಂಗ ಸಚಿವಾಲಯ ತನ್ನ ನಿಲುವನ್ನು ಪುನರುಚ್ಚರಿಸಿದೆ. ಪಾಕಿಸ್ತಾನದಿಂದ ನಡೆಯುತ್ತಿರುವ ಗಡಿಯಾಚೆಗಿನ ಭಯೋತ್ಪಾದಕ ಚಟುವಟಿಕೆಗಳ ಹಿನ್ನೆಲೆಯಲ್ಲಿ ಒಪ್ಪಂದವನ್ನು ಅಮಾನತುಗೊಳಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಭಯೋತ್ಪಾದನೆಯನ್ನು ಬೆಂಬಲಿಸುವ ಚಟುವಟಿಕೆಗಳನ್ನು ಪಾಕಿಸ್ತಾನ ಸಂಪೂರ್ಣವಾಗಿ ನಿಲ್ಲಿಸಬೇಕು. ಅಷ್ಟೇ ಅಲ್ಲದೆ, ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಧಕ್ಕೆ ತರುವ ನೀತಿಗಳನ್ನು ಕೈಬಿಡಬೇಕು ಎಂದು ಭಾರತ ಒತ್ತಾಯಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande