ಭಾರತೀಯ ಪ್ರವಾಸೋದ್ಯಮದಲ್ಲಿ 12 ವರ್ಷಗಳ ಪರಿವರ್ತನೆ
ನವದೆಹಲಿ, 11 ಜೂನ್ (ಹಿ.ಸ.) : ಆ್ಯಂಕರ್ : ಭಾರತವನ್ನು ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಇನ್ನಷ್ಟು ಸುರಕ್ಷಿತ ಮತ್ತು ಪ್ರವಾಸಿಗ ಸ್ನೇಹಿ ರಾಷ್ಟ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಳೆದ 12 ವರ್ಷಗಳಲ್ಲಿ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ದೇಶೀಯ ಹಾಗೂ ವಿದೇಶಿ ಪ್ರವಾಸಿಗರು
Photo


ನವದೆಹಲಿ, 11 ಜೂನ್ (ಹಿ.ಸ.) :

ಆ್ಯಂಕರ್ : ಭಾರತವನ್ನು ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಇನ್ನಷ್ಟು ಸುರಕ್ಷಿತ ಮತ್ತು ಪ್ರವಾಸಿಗ ಸ್ನೇಹಿ ರಾಷ್ಟ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಳೆದ 12 ವರ್ಷಗಳಲ್ಲಿ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ದೇಶೀಯ ಹಾಗೂ ವಿದೇಶಿ ಪ್ರವಾಸಿಗರು ಯಾವುದೇ ಭಯವಿಲ್ಲದೆ ದೇಶದ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಬಲಿಷ್ಠ ಪ್ರವಾಸೋದ್ಯಮ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲಾಗುತ್ತಿದೆ.

ಪ್ರವಾಸೋದ್ಯಮ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ಪ್ರವಾಸಿಗರಿಗೆ ಸುರಕ್ಷಿತ ಮತ್ತು ಸುಗಮ ಪ್ರಯಾಣದ ಅನುಭವ ಒದಗಿಸಲು 24 ಗಂಟೆಗಳ ಬಹುಭಾಷಾ ಸಹಾಯವಾಣಿ ಹಾಗೂ ಪ್ರಮುಖ ಪ್ರವಾಸಿ ತಾಣಗಳಲ್ಲಿ ವಿಶೇಷ ಟೂರಿಸ್ಟ್ ಪೊಲೀಸ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ಪ್ರಯಾಣದ ವೇಳೆ ತುರ್ತು ಪರಿಸ್ಥಿತಿ, ದೂರು ಅಥವಾ ಅಗತ್ಯ ಮಾಹಿತಿಗಾಗಿ ಕೇಂದ್ರ ಸರ್ಕಾರ 1363 ಎಂಬ ವಿಶೇಷ ಟೋಲ್-ಫ್ರೀ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ. ಈ ಸಹಾಯವಾಣಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದು, ದೇಶೀಯ ಹಾಗೂ ವಿದೇಶಿ ಪ್ರವಾಸಿಗರ ಅನುಕೂಲಕ್ಕಾಗಿ 12 ವಿವಿಧ ಭಾಷೆಗಳಲ್ಲಿ ಸೇವೆ ನೀಡಲಾಗುತ್ತಿದೆ. ಭಾಷೆಯ ಅಡೆತಡೆ ಇಲ್ಲದೆ ಪ್ರತಿಯೊಬ್ಬ ಪ್ರವಾಸಿಗನಿಗೂ ತ್ವರಿತ ನೆರವು ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ.

ಇದರ ಜೊತೆಗೆ, ಪ್ರವಾಸಿಗರ ಸುರಕ್ಷತೆಗಾಗಿ ಪ್ರಮುಖ ಪ್ರವಾಸಿ ರಾಜ್ಯಗಳಲ್ಲಿ ವಿಶೇಷ ಟೂರಿಸ್ಟ್ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಪ್ರಸ್ತುತ ಗೋವಾ, ಕೇರಳ, ರಾಜಸ್ಥಾನ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶದ 15 ಪ್ರಮುಖ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ವ್ಯವಸ್ಥೆ ಸಕ್ರಿಯವಾಗಿದೆ.

ಈ ವಿಶೇಷ ಪೊಲೀಸ್ ಪಡೆಯ ಪ್ರಮುಖ ಉದ್ದೇಶ ಪ್ರವಾಸಿ ತಾಣಗಳಲ್ಲಿ ನಡೆಯುವ ವಂಚನೆಗಳನ್ನು ತಡೆಗಟ್ಟುವುದು, ಪ್ರವಾಸಿಗರಿಗೆ ಮಾರ್ಗದರ್ಶನ ನೀಡುವುದು ಹಾಗೂ ಅವರ ವಿರುದ್ಧದ ದುರ್ವರ್ತನೆ ಅಥವಾ ಕಿರುಕುಳದ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳುವುದಾಗಿದೆ.

ಸಚಿವಾಲಯದ ಪ್ರಕಾರ, ಈ ಆಧುನಿಕ ಹಾಗೂ ಸಮಗ್ರ ವ್ಯವಸ್ಥೆಯ ಮೂಲಕ ದೇಶದ ಯಾವುದೇ ಭಾಗಕ್ಕೆ ಪ್ರವಾಸ ಕೈಗೊಂಡರೂ ಅಗತ್ಯ ಸಂದರ್ಭದಲ್ಲಿ ನೆರವು ಸದಾ ಲಭ್ಯವಿರುತ್ತದೆ ಎಂಬ ವಿಶ್ವಾಸವನ್ನು ಪ್ರತಿಯೊಬ್ಬ ಪ್ರವಾಸಿಗರಲ್ಲಿ ಮೂಡಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande