ದೇಶದ ರಕ್ಷಣಾ ಉತ್ಪಾದನೆಯಲ್ಲಿ ಹೊಸ ದಾಖಲೆ
ನವದೆಹಲಿ, 17 ಜೂನ್ (ಹಿ.ಸ.) : ಆ್ಯಂಕರ್ : ಭಾರತದ ರಕ್ಷಣಾ ಉತ್ಪಾದನಾ ಕ್ಷೇತ್ರವು ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, 2025-26ನೇ ಹಣಕಾಸು ವರ್ಷದಲ್ಲಿ ದೇಶದ ವಾರ್ಷಿಕ ರಕ್ಷಣಾ ಉತ್ಪಾದನೆ ₹1.78 ಲಕ್ಷ ಕೋಟಿ ರೂಪಾಯಿಗಳ ದಾಖಲೆಯ ಮಟ್ಟ ತಲುಪಿದೆ. ರಕ್ಷಣಾ ಸಚಿವಾಲಯದ ಮಾಹಿತಿಯ ಪ್ರಕಾರ, 202
Defence


ನವದೆಹಲಿ, 17 ಜೂನ್ (ಹಿ.ಸ.) :

ಆ್ಯಂಕರ್ : ಭಾರತದ ರಕ್ಷಣಾ ಉತ್ಪಾದನಾ ಕ್ಷೇತ್ರವು ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, 2025-26ನೇ ಹಣಕಾಸು ವರ್ಷದಲ್ಲಿ ದೇಶದ ವಾರ್ಷಿಕ ರಕ್ಷಣಾ ಉತ್ಪಾದನೆ ₹1.78 ಲಕ್ಷ ಕೋಟಿ ರೂಪಾಯಿಗಳ ದಾಖಲೆಯ ಮಟ್ಟ ತಲುಪಿದೆ.

ರಕ್ಷಣಾ ಸಚಿವಾಲಯದ ಮಾಹಿತಿಯ ಪ್ರಕಾರ, 2024-25ನೇ ಹಣಕಾಸು ವರ್ಷದಲ್ಲಿ ದಾಖಲಾಗಿದ್ದ ₹1.54 ಲಕ್ಷ ಕೋಟಿ ಉತ್ಪಾದನೆಯೊಂದಿಗೆ ಹೋಲಿಸಿದರೆ ಇದು ಶೇಕಡಾ 15.6ರಷ್ಟು ಹೆಚ್ಚಳವಾಗಿದೆ. ಅಲ್ಲದೆ, 2020-21ನೇ ಹಣಕಾಸು ವರ್ಷದಲ್ಲಿ ರಕ್ಷಣಾ ಉತ್ಪಾದನೆಯ ಮೌಲ್ಯ ₹84,643 ಕೋಟಿ ಇದ್ದರೆ, ಕಳೆದ ಐದು ವರ್ಷಗಳಲ್ಲಿ ಶೇಕಡಾ 110ರಷ್ಟು ಭಾರೀ ಏರಿಕೆ ದಾಖಲಾಗಿದೆ.

ರಕ್ಷಣಾ ಉತ್ಪಾದನೆಯಲ್ಲಿ ಸಾರ್ವಜನಿಕ ವಲಯದ ರಕ್ಷಣಾ ಸಂಸ್ಥೆಗಳು ಮತ್ತು ಇತರೆ ಸಾರ್ವಜನಿಕ ವಲಯದ ಉದ್ಯಮಗಳು ಒಟ್ಟಾರೆ ಉತ್ಪಾದನೆಯಲ್ಲಿ ಸುಮಾರು ಶೇಕಡಾ 76ರಷ್ಟು ಪಾಲು ಹೊಂದಿವೆ. ಖಾಸಗಿ ವಲಯದ ಪಾಲು ಶೇಕಡಾ 24ರಷ್ಟಿದ್ದು, ಇದು 2024-25ನೇ ಹಣಕಾಸು ವರ್ಷದಲ್ಲಿದ್ದ ಶೇಕಡಾ 22ರಷ್ಟಿಗಿಂತ ಹೆಚ್ಚಾಗಿದೆ.

2025-26ನೇ ಹಣಕಾಸು ವರ್ಷದಲ್ಲಿ ಖಾಸಗಿ ವಲಯದ ರಕ್ಷಣಾ ಉತ್ಪಾದನೆಯ ಮೌಲ್ಯ ಸುಮಾರು ₹42,000 ಕೋಟಿಗೆ ತಲುಪಿದ್ದು, ಇದು ಇದುವರೆಗಿನ ಅತ್ಯುನ್ನತ ಮಟ್ಟವಾಗಿದೆ. ದೇಶದ ರಕ್ಷಣಾ ಪರಿಸರ ವ್ಯವಸ್ಥೆಯಲ್ಲಿ ಖಾಸಗಿ ವಲಯದ ಪಾತ್ರ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವುದನ್ನು ಇದು ಸೂಚಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಕಳೆದ ಕೆಲವು ವರ್ಷಗಳಲ್ಲಿ ರಕ್ಷಣಾ ಉತ್ಪಾದನೆಯಲ್ಲಿ ಕಂಡುಬಂದ ನಿರಂತರ ಬೆಳವಣಿಗೆಯು ರಕ್ಷಣಾ ರಫ್ತು ಕ್ಷೇತ್ರಕ್ಕೂ ಮಹತ್ತರ ಕೊಡುಗೆ ನೀಡಿದೆ. 2025-26ನೇ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ರಫ್ತು ₹38,424 ಕೋಟಿ ರೂಪಾಯಿಗಳ ದಾಖಲೆ ಮಟ್ಟ ತಲುಪಿದ್ದು, ದೇಶದ ರಕ್ಷಣಾ ಉತ್ಪಾದನಾ ಸಾಮರ್ಥ್ಯ ಜಾಗತಿಕ ಮಾರುಕಟ್ಟೆಯಲ್ಲಿ ಮತ್ತಷ್ಟು ಬಲ ಪಡೆದಿರುವುದನ್ನು ತೋರಿಸಿದೆ.

ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಕ್ಷಣಾ ಉತ್ಪಾದನಾ ಇಲಾಖೆ, ಸಾರ್ವಜನಿಕ ವಲಯದ ಸಂಸ್ಥೆಗಳು ಹಾಗೂ ಖಾಸಗಿ ವಲಯದ ಉದ್ಯಮಗಳ ಸಮೂಹ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

ದೇಶದ ರಕ್ಷಣಾ ಕೈಗಾರಿಕಾ ನೆಲೆಯು ವೇಗವಾಗಿ ವಿಸ್ತರಿಸುತ್ತಿರುವುದಕ್ಕೆ ಈ ಸಾಧನೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ. ನಿರಂತರ ನೀತಿ ಬೆಂಬಲ, ಹೊಸ ಯೋಜನೆಗಳು, ಖಾಸಗಿ ವಲಯದ ಹೆಚ್ಚುತ್ತಿರುವ ಭಾಗವಹಿಸುವಿಕೆ ಹಾಗೂ ರಫ್ತು ಸಾಮರ್ಥ್ಯದ ವೃದ್ಧಿಯೊಂದಿಗೆ ಭಾರತದ ರಕ್ಷಣಾ ಉತ್ಪಾದನಾ ಕ್ಷೇತ್ರವು ಮುಂದಿನ ವರ್ಷಗಳಲ್ಲಿ ಇನ್ನಷ್ಟು ವೇಗವಾಗಿ ಬೆಳೆಯುವ ನಿರೀಕ್ಷೆಯಿದೆ ಎಂದು ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande