

ಕೊಪ್ಪಳ, 19 ಜೂನ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಡಿಸ್ಟ್ರಿಕ್ಟ್ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾಗಿ ಕೊಪ್ಪಳ ಜಿಲ್ಲೆಯ ಹಿರಿಯ ತರಬೇತುದಾರ ರಾಜಾಬಕ್ಷಿ ಹೆಚ್ ವಿ ಅವರು ನೇಮಕಗೊಂಡಿದ್ದಾರೆ.
ಅಖಿಲ ಕರ್ನಾಟಕ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಷನ್ ರಾಜ್ಯ ಅಧ್ಯಕ್ಷರಾದ ಮತ್ತು ಕರ್ನಾಟಕ ರಾಜ್ಯ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಎಂ.ಸಿ. ಅರುಣ್ ಮಾಚಯ್ಯ ಮತ್ತು ಕಾರ್ಯದರ್ಶಿಯಾಗಿರುವ ಭಾರ್ಗವರೆಡ್ಡಿ .ಜೆ ಅವರು ಇವರನ್ನು ನೇಮಕಾತಿ ಮಾಡಿದ್ದಾರೆ.
ಮೂರು ದಶಕಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಕರಾಟೆ ತರಬೇತಿಯಲ್ಲಿ ತೊಡಗಿಸಿಕೊಂಡಿರುವ ಹಾಗೂ ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿ ಮುಖ್ಯಸ್ಥರಾದ ರಾಜಾಬಕ್ಷಿ ಎಚ್.ವಿ ಅವರು ಕರಾಟೆ ಶಿಕ್ಷಕರನ್ನು ಸಂಘಟಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಕೊಪ್ಪಳ ಜಿಲ್ಲೆಯ ಕ್ರೀಡಾಪಟುಗಳಿಗೆ ಅವಕಾಶ ದೊರಕಿಸಿ ಕೊಡುವಂತಾಗಲು ಶ್ರಮಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್