
ಕೊಪ್ಪಳ, 20 ಜೂನ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ವೃತ್ತ ಕಛೇರಿ ವ್ಯಾಪ್ತಿಗೆ ಒಳಪಡುವ ಕೊಪ್ಪಳ ಜಿಲ್ಲೆಯ ಇ.ಎಚ್.ಟಿ ಹಾಗೂ ಎಚ್.ಟಿ. ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಜೂನ್ 22 ರಂದು ಬೆಳಗ್ಗೆ 11.30 ಗಂಟೆಗೆ ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ವೃತ್ತ ಕಛೇರಿಯ ಅಧೀಕ್ಷಕ ಅಭಿಯಂತರರು ಈ ಸಭೆಯ ಅಧ್ಯಕ್ಷತೆ ವಹಿಸುವರು. ಇ.ಎಚ್.ಟಿ ಹಾಗೂ ಎಚ್.ಟಿ. ವಿದ್ಯುತ್ ಗ್ರಾಹಕರು ಈ ಸಭೆಗೆ ಹಾಜರಾರುವಂತೆ ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ವೃತ್ತ ಕಛೇರಿಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್