

ಕೊಪ್ಪಳ, 30 ಜೂನ್ (ಹಿ.ಸ.) :
ಆ್ಯಂಕರ್ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ (ಎಸ್.ಐ.ಆರ್) ಮನೆಮನೆ ಭೇಟಿ ಕಾರ್ಯವು ಜೂನ್ 30 ರಿಂದ ಆರಂಭವಾಯಿತು.
ಈ ಮನೆ ಮನೆ ಭೇಟಿ ಕಾರ್ಯವು ಜೂನ್ 30 ರಿಂದ ಆರಂಭವಾಗಿ ಜುಲೈ 29ರವರೆಗೆ ನಡೆಯಲಿದೆ.
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ, ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ್ ಇಟ್ನಾಳ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರು ಜೂನ್ 30ರಂದು ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡು ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮಕ್ಕೆ ತೆರಳಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಕೊಪ್ಪಳ ಜಿಲ್ಲೆಯ ತೊಗಲು ಗೊಂಬೆ ಕಲಾವಿದೆ ಭೀಮವ್ವ ಸಿಳ್ಳೆಕ್ಯಾತರ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಗಣತಿ ನಮೂನೆ ವಿತರಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ತಹಶೀಲ್ದಾರ್ ಬಸವರಾಜ ತನ್ನಳ್ಳಿ, ಬೂತ್ ಮಟ್ಟದ ಅಧಿಕಾರಿ (ಬಿ.ಎಲ್.ಒ) ಲಕ್ಷ್ಮವ್ವ ಸೇರಿದಂತೆ ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್