

ಕೊಪ್ಪಳ, 04 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ಬಗ್ಗೆ ಕೊಪ್ಪಳ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಜೂನ್ 04ರಂದು ಸಂವಾದ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಭಾರತ ಚುನಾವಣಾ ಆಯೋಗವು 14ನೇ ಮೇ 2026ರಂದು ಅಧಿಸೂಚನೆ ಹೊರಡಿಸಿ, ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ವೇಳಾಪಟ್ಟಿ ನಿಗದಿಪಡಿಸಿದೆ. ನಮ್ಮ ದೇಶದಲ್ಲಿ 2002ರಲ್ಲಿ ಈ ಹಿಂದೆ ಎಸ್.ಐ.ಆರ್ ಆಗಿತ್ತು. 2025ರ ಮತದಾರರ ಪಟ್ಟಿಯಲ್ಲಿ ಇರುವವರು 2010ರ ಮತದಾರರ ಪಟ್ಟಿಯಲ್ಲಿ ಎಲ್ಲಿದ್ದರು ಎಂದು ಈಗ ಮ್ಯಾಪಿಂಗ್ ಮಾಡಲಾಗುತ್ತಿದೆ.
ಜನಗಣತಿಗೆ ನೇಮಕವಾದ ಅಧಿಕಾರಿಗಳು ಮತ್ತು ಸಿಬ್ಬಂದಿಯು 2002ರ ಮತ್ತು 2025ರ ಈ ಎರಡು ಮತದಾರರ ಪಟ್ಟಿಗಳನ್ನು ಇಟ್ಟುಕೊಂಡು ಮ್ಯಾಪಿಂಗ್ ಕಾರ್ಯ ಮಾಡುತ್ತಿದ್ದಾರೆ. ಜೂನ್ 30 ರಿಂದ ಒಂದು ತಿಂಗಳ ಕಾಲ ಬಿ.ಎಲ್.ಓ ಮನೆಮನೆಗೆ ಭೇಟಿ ಕೊಡುತ್ತಾರೆ. ಮ್ಯಾಪಿಂಗ್ ಮಾಡಿದ ಎಲ್ಲರಿಗೂ ಜನಗಣತಿ ಫಾರ್ಮನ್ನು ಕೊಡಲಾಗುತ್ತದೆ.
ಬಿ.ಎಲ್.ಓ.ಗಳು ಮತದಾರರಿಗೆ ಗೈಡ್ ಮಾಡಿ ಜನಗಣತಿ ಪಾರ್ಮನ್ನು ತುಂಬಿಸುತ್ತಾರೆ. ಗಣತಿ ವೇಳೆಯಲ್ಲಿ, ಮತದಾರರು ನಾನು ಯಾವುದೆ ದೇಶದಲ್ಲಿ ಪೌರತ್ವ ಹೊಂದಿಲ್ಲ. ನನ್ನ ಹೆಸರು ಒಂದೇ ಕಡೆ ಇದ್ದು ಬೇರೆಡೆ ಇಲ್ಲ ಎನ್ನುವಂತಹ ಡಿಕ್ಲೇರೆಷನ್ ನೀಡಬೇಕು ಎನ್ನುವಂತಹ ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆಯ ಈ ಸಂದರ್ಭದಲ್ಲಿ ಹೆಸರು ಸೇರಿಸಲು, ಹೆಸರು ತೆಗೆಯಲು ಮತ್ತು ಹೆಸರನ್ನು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ತೀರಿಕೊಂಡ ಅಥವಾ ಬೇರೆಡೆ ಸ್ಥಳಾಂತರವಾದ ಅಥವಾ ಡುಪ್ಲಿಕೇಟ್ ಮತದಾರರು ಯಾರು ಎಂಬುದನ್ನು ಪತ್ತೆ ಹಚ್ಚಿ ಮತದಾರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ. ಈ ಪರಿಷ್ಕರಣಾ ಕಾರ್ಯದಲ್ಲಿ ರಾಜಕೀಯ ಪಕ್ಷಗಳಿಂದ ನೇಮಕಗೊಂಡ ಬಿ.ಎಲ್.ಎ.ಗಳು ಸಹ ಭಾಗಿಯಾಗುತ್ತಾರೆ ಎಂದರು.
ಕೊಪ್ಪಳ ಜಿಲ್ಲೆಯಲ್ಲಿ 2025ರ ಮತದಾರರ ಪಟ್ಟಿಯಲ್ಲಿ ಒಟ್ಟು 11,92,307 ಮತದಾರರ ಪೈಕಿ ಇದುವರೆಗೆ 11,34,937 ಮತದಾರರಿಗೆ ಈಗಾಗಲೇ ಮ್ಯಾಪಿಂಗ್ ಮಾಡಿದ್ದು, 57,370 ಮತದಾರರಿಗೆ ಮ್ಯಾಪಿಂಗ್ ಕಾರ್ಯ ಬಾಕಿ ಇದೆ ಎಂದು ತಿಳಿಸಿದರು.
ಈ ವೇಳೆ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಹಾಗೂ ಮಾಧ್ಯಮ ಪ್ರತಿನಿಧಿಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್