
ಮೈಸೂರು, 01 ಜುಲೈ (ಹಿ.ಸ.):
ಆ್ಯಂಕರ್:
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವನೂರು ಗ್ರಾಮದಲ್ಲಿ ಗುರುಮಲ್ಲೇಶ್ವರ ಮಹಾ ಸಂಸ್ಥಾನ ದಾಸೋಹ ಮಠ ಆಯೋಜಿಸಿದ್ದ ಶ್ರೀ ಗುರು ಮಲ್ಲೇಶ್ವರರ 127ನೇ ಪುಣ್ಯಾರಾಧನೆ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶ್ರೀಮಠದ ಪೀಠಾಧಿಪತಿ ಶ್ರೀ ಮಹಾಂತ ಸ್ವಾಮೀಜಿ, ಮಾಜಿ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ಶಾಸಕರಾದ ದರ್ಶನ್ ಧ್ರುವ ನಾರಾಯಣ, ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.