ರಾಮ ಮಂದಿರ ದೇಣಿಗೆ ಪ್ರಕರಣಕ್ಕೆ ಸಿಬಿಐ ತನಿಖೆಗೆ ಹರಿಪ್ರಸಾದ ಆಗ್ರಹ
ಬೆಂಗಳೂರು, 10 ಜುಲೈ (ಹಿ.ಸ.): ಆ್ಯಂಕರ್: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ರಾಮ ಮಂದಿರ ದೇಣಿಗೆ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿ, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅ
ಹರಿಪ್ರಸಾದ


ಬೆಂಗಳೂರು, 10 ಜುಲೈ (ಹಿ.ಸ.):

ಆ್ಯಂಕರ್:

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ರಾಮ ಮಂದಿರ ದೇಣಿಗೆ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿ, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡುವ ಮೊದಲು ಬಿಜೆಪಿ ನಾಯಕರು ತಮ್ಮ ಮೇಲಿರುವ ಭ್ರಷ್ಟಾಚಾರ ಮತ್ತು ಇತರ ಆರೋಪಗಳಿಗೆ ಉತ್ತರ ನೀಡಬೇಕು ಎಂದು ಹೇಳಿದರು. ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಸಾರ್ವಜನಿಕರ ಹಣವಾಗಿದ್ದು, ಅದರ ರಕ್ಷಣೆ ಮತ್ತು ನಿರ್ವಹಣೆಯ ಜವಾಬ್ದಾರಿ ಟ್ರಸ್ಟ್ ಹಾಗೂ ಕೇಂದ್ರ ಸರ್ಕಾರದ ಮೇಲಿದೆ ಎಂದು ತಿಳಿಸಿದರು.

ರಾಮ ಮಂದಿರದ ದೇಣಿಗೆ ದುರುಪಯೋಗದ ಆರೋಪಗಳ ಕುರಿತು ಸಿಬಿಐ ನೇತೃತ್ವದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ ಅವರು, ಈ ಪ್ರಕರಣದ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಆರ್‌ಎಸ್‌ಎಸ್‌ನ ಬೆಳಗಾವಿ ಸಭೆ ಕುರಿತು ಪ್ರತಿಕ್ರಿಯಿಸಿದ ಹರಿಪ್ರಸಾದ್, ಸಭೆಯ ನಂತರದ ಬೆಳವಣಿಗೆಗಳನ್ನು ಗಮನಿಸಿ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. ಜಿಬಿಎ ಚುನಾವಣೆ ಕುರಿತು ಮಾತನಾಡಿ, ಅಧಿಕಾರಿಗಳ ಕೊರತೆಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ವಿಳಂಬವಾಗಿದ್ದು, ಚುನಾವಣೆ ನಡೆಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ತಿಳಿಸಿದರು.

ಅಕ್ರಮ ವಲಸಿಗರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಕರ್ನಾಟಕಕ್ಕೆ ಅಕ್ರಮ ವಲಸಿಗರು ಬಂದಿದ್ದರೆ ಅದಕ್ಕೆ ಕೇಂದ್ರ ಸರ್ಕಾರವೇ ಉತ್ತರಿಸಬೇಕು ಎಂದರು. ಸಚಿವ ಸಂಪುಟ ವಿಸ್ತರಣೆ ವಿಳಂಬದಿಂದ ಪಕ್ಷ ಸಂಘಟನೆಗೆ ಯಾವುದೇ ತೊಂದರೆ ಇಲ್ಲ. ಸರ್ಕಾರ ಮತ್ತು ಪಕ್ಷದ ನಡುವೆ ಉತ್ತಮ ಸಮನ್ವಯತೆ ಇದೆ ಎಂದು ಸ್ಪಷ್ಟಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande