
ಬೆಂಗಳೂರು, 10 ಜುಲೈ (ಹಿ.ಸ.)
ರೈಸ್ ಕರ್ನಾಟಕ ಹಾಗೂ ಬೇಡಬ್ರೋ ಮಾದಕವಸ್ತು ವಿಧಾನ ಮಾದಕವಸ್ತು ವಿರೋಧಿ ಅಭಿಯಾನದ ಅಂಗವಾಗಿ, ಬೆಂಗಳೂರು ನಗರ ಪೊಲೀಸ್ ವತಿಯಿಂದ ನಗರದ ಸೌಂದರ್ಯ ಪಿಯು ಕಾಲೇಜಿನಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಅಪಾಯಗಳ ಕುರಿತು ಅರಿವು ಮೂಡಿಸಿ, ಮಾದಕ ವಸ್ತುಗಳಿಗೆ ಇಲ್ಲ ಎಂದು ದೃಢವಾಗಿ ಹೇಳುವಂತೆ ಪ್ರೇರೇಪಿಸಲಾಯಿತು.
ಜಾಗೃತ ವಿದ್ಯಾರ್ಥಿಗಳೇ ಮಾದಕ ವಸ್ತು ಮುಕ್ತ ಕರ್ನಾಟಕ ನಿರ್ಮಾಣದ ಪ್ರಮುಖ ಶಕ್ತಿಯಾಗಿದ್ದು, ಯುವಜನರಲ್ಲಿ ಮಾದಕವಸ್ತುಗಳ ವಿರುದ್ಧ ಸಾಮಾಜಿಕ ಜವಾಬ್ದಾರಿ ಮತ್ತು ಅರಿವು ಮೂಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಇಲಾಖೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / SNEHA K