
ಬೆಳಗಾವಿ, 12 ಜುಲೈ (ಹಿ.ಸ.):
ಆ್ಯಂಕರ್:
ನಿಪ್ಪಾಣಿ ನಗರದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ₹3.25 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭಾನುವಾರ ಚಾಲನೆ ನೀಡಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಶೌರ್ಯ ಮತ್ತು ತ್ಯಾಗಕ್ಕೆ ಗೌರವ ಸಲ್ಲಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಈ ಯೋಜನೆಯು ನಿಪ್ಪಾಣಿ ನಗರದ ಸೌಂದರ್ಯವರ್ಧನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿದೆ ಎಂದು ಸಚಿವರು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.