62 ಗ್ರಾಮ ಪಂಚಾಯತ್ ಸಿಬ್ಬಂದಿಗೆ ಬಡ್ತಿ ನೇಮಕಾತಿ ಆದೇಶ ವಿತರಣೆ
ಬೆಳಗಾವಿ, 13 ಜುಲೈ (ಹಿ.ಸ.): ಆ್ಯಂಕರ್: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಆಂತರಿಕ ನೇಮಕಾತಿ ಪಡೆದ 62 ಗ್ರಾಮ ಪಂಚಾಯತ್ ಸಿಬ್ಬಂದಿಗೆ ನೇಮಕಾತಿ ಆದೇಶಗಳನ್ನು ವಿತರಿಸಿದರು.
ವಿತರಣೆ


ಬೆಳಗಾವಿ, 13 ಜುಲೈ (ಹಿ.ಸ.):

ಆ್ಯಂಕರ್:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಆಂತರಿಕ ನೇಮಕಾತಿ ಪಡೆದ 62 ಗ್ರಾಮ ಪಂಚಾಯತ್ ಸಿಬ್ಬಂದಿಗೆ ನೇಮಕಾತಿ ಆದೇಶಗಳನ್ನು ವಿತರಿಸಿದರು.

ಕರ ವಸೂಲಿಗಾರರು ಹಾಗೂ ಕ್ಲರ್ಕ್/ಕ್ಲರ್ಕ್-ಕಂ-ಡಾಟಾ ಎಂಟ್ರಿ ಆಪರೇಟರ್ ವೃಂದದಿಂದ ಗ್ರಾಮ ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ಬಡ್ತಿ ಆಧಾರಿತ ಆಂತರಿಕ ನೇಮಕಾತಿ ಪಡೆದ ಸಿಬ್ಬಂದಿಗೆ ಸಚಿವರು ಆದೇಶ ಪತ್ರಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಗ್ರಾಮೀಣ ಜನತೆಗೆ ಇನ್ನಷ್ಟು ಪರಿಣಾಮಕಾರಿ ಸೇವೆ ಸಲ್ಲಿಸಬೇಕು. ಗ್ರಾಮ ಪಂಚಾಯತ್‌ಗಳ ಆಡಳಿತವನ್ನು ಬಲಪಡಿಸುವ ಮೂಲಕ ಗ್ರಾಮೀಣಾಭಿವೃದ್ಧಿಗೆ ತಮ್ಮ ಅಮೂಲ್ಯ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande