
ಬೆಂಗಳೂರು, 19 ಜುಲೈ (ಹಿ.ಸ.):
ಆ್ಯಂಕರ್:
ಜನತೆಗೆ ನೀಡಿದ ಭರವಸೆಗಳನ್ನು ಸಾಕಾರಗೊಳಿಸುವುದೇ ನಿಜವಾದ ಅಭಿವೃದ್ಧಿ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ನಗರದ ನರಸೀಪುರ ಮತ್ತು ಕುವೆಂಪುನಗರ ಮೊದಲನೇ ಹಂತದಲ್ಲಿ ಕೈಗೆತ್ತಿಕೊಳ್ಳಲಾದ ಕಾಂಕ್ರೀಟ್ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದ ಅವರು, ಈ ರಸ್ತೆಗಳು ಸ್ಥಳೀಯ ಸಂಪರ್ಕವನ್ನು ಮತ್ತಷ್ಟು ಸುಧಾರಿಸುವುದರ ಜೊತೆಗೆ ಮೂಲಸೌಕರ್ಯವನ್ನು ಬಲಪಡಿಸಲಿವೆ ಎಂದು ತಿಳಿಸಿದರು.
ಇದರೊಂದಿಗೆ ಸಾರ್ವಜನಿಕರ ಸಂಚಾರ ಇನ್ನಷ್ಟು ಸುರಕ್ಷಿತ ಹಾಗೂ ಸುಗಮವಾಗಲಿದ್ದು, ಅಭಿವೃದ್ಧಿ ಕಾಮಗಾರಿಗಳ ಮೂಲಕ ಜನರ ನಿರೀಕ್ಷೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.