
ಬೆಳಗಾವಿ, 20 ಜುಲೈ (ಹಿ.ಸ.):
ಆ್ಯಂಕರ್:ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳು ಸೋಮವಾರ ಬೆಳಗಾವಿಗೆ ಭೇಟಿ ನೀಡಿ, ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್ಐಆರ್) ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು.
ಈ ವೇಳೆ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಸಹಾಯ ಕೇಂದ್ರಕ್ಕೆ ಭೇಟಿ ನೀಡಿ, ಮತದಾರರ ನೋಂದಣಿ, ತಿದ್ದುಪಡಿ ಹಾಗೂ ಪರಿಷ್ಕರಣೆ ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಸಮರ್ಪಕವಾಗಿ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.