
ಬಳ್ಳಾರಿ, 20 ಜುಲೈ (ಹಿ.ಸ.):
ಆ್ಯಂಕರ್ :ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಅರ್ಥಸಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಸತೀಸ್ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.
ವಿವಿಯ ಸಮಾಜ ವಿಜ್ಞಾನ ನಿಕಾಯದ ಅರ್ಥಸಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಮೇಧಾವಿನಿ ಎಸ್. ಕಟ್ಟಿ ಅವರ ಮಾರ್ಗದರ್ಶನದಲ್ಲಿ “ಇನ್ಫ್ರಾಸ್ಟ್ರಕ್ಚರ್ ಅಂಡ್ ಅಗ್ರಿಕಲ್ಚರ್ ಡೆವಲಪ್ಮೆಂಟ್ ಇನ್ ಕಲ್ಯಾಣ ಕರ್ನಾಟಕ ರೀಜನ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಎಚ್ಡಿ ಪದವಿ ನೀಡಲಾಗಿದೆ ಎಂದು ವಿಶ್ವವಿದ್ಯಾಲಯವು ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್