
ಬೆಂಗಳೂರು, 22 ಜುಲೈ (ಹಿ.ಸ.):
ಆ್ಯಂಕರ್:
ರಾಷ್ಟ್ರೀಯ ಧ್ವಜ ದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇಶದ ತ್ರಿವರ್ಣ ಧ್ವಜಕ್ಕೆ ಗೌರವ ಸಲ್ಲಿಸಿ, ಏಕತೆ, ಪ್ರಜಾಪ್ರಭುತ್ವ ಹಾಗೂ ನ್ಯಾಯದ ಮೌಲ್ಯಗಳನ್ನು ಕಾಪಾಡುವ ಸಂಕಲ್ಪವನ್ನು ಮತ್ತೊಮ್ಮೆ ನವೀಕರಿಸೋಣ ಎಂದು ಕರೆ ನೀಡಿದ್ದಾರೆ.
ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, 1947ರ ಜುಲೈ 22ರಂದು ಭಾರತದ ಸಂವಿಧಾನ ಸಭೆಯು ಸ್ವತಂತ್ರ ಭಾರತದ ರಾಷ್ಟ್ರೀಯ ಧ್ವಜವಾಗಿ ತ್ರಿವರ್ಣ ಧ್ವಜವನ್ನು ಅಂಗೀಕರಿಸಿತ್ತು. ಈ ಧ್ವಜವು ನಮ್ಮ ಹಂಚಿಕೊಂಡ ಇತಿಹಾಸ, ತ್ಯಾಗ ಮತ್ತು ಆಶಯಗಳ ಪ್ರತೀಕವಾಗಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಧ್ವಜವು ಪ್ರತಿನಿತ್ಯ ದೇಶದ ಏಕತೆ, ಸಮಗ್ರತೆ ಮತ್ತು ಎಲ್ಲರನ್ನು ಒಳಗೊಂಡ ಭಾರತದ ನಿರ್ಮಾಣಕ್ಕೆ ಪ್ರೇರಣೆ ನೀಡಲಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಸಂದೇಶದಲ್ಲಿ ಆಶಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.