ಸಂಸತ್ತ ಆವರಣದಲ್ಲಿ ಕಾಂಗ್ರೆಸ್ ವಿರುದ್ಧ ಎನ್ಡಿಎ ಸಂಸದರ ಪ್ರತಿಭಟನೆ
ನವದೆಹಲಿ, ಜುಲೈ 23(ಹಿ.ಸ.): ಆ್ಯಂಕರ್: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರವಾಗಿಸಿಕೊಂಡು ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸಂಸದರು ಗುರುವಾರ ಸಂಸತ್ ಭವನದ ಮಕರ ದ್ವಾರದಲ್ಲಿ ಕಾ
मकर द्वार पर राजग के सांसद प्रदर्शन करते हुए


ನವದೆಹಲಿ, ಜುಲೈ 23(ಹಿ.ಸ.):

ಆ್ಯಂಕರ್:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರವಾಗಿಸಿಕೊಂಡು ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸಂಸದರು ಗುರುವಾರ ಸಂಸತ್ ಭವನದ ಮಕರ ದ್ವಾರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು. ಜುಲೈ 21ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಸಮೀಪ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಗೆ ಪ್ರತಿಯಾಗಿ ಈ ಪ್ರತಿಭಟನೆ ಆಯೋಜಿಸಲಾಯಿತು.

ಭಾರತೀಯ ಜನತಾ ಪಕ್ಷವು ಕಾಂಗ್ರೆಸ್ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರತಿಪಕ್ಷದ ಜವಾಬ್ದಾರಿ ನಿರ್ವಹಿಸುವ ಬದಲು ಸದನದಲ್ಲಿ ಗದ್ದಲ ಸೃಷ್ಟಿಸುವುದರಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದೆ.

ಬಿಜೆಪಿ ಸಂಸದ ಸಂಬಿತ್ ಪಾತ್ರಾ ಮಾತನಾಡಿ, ಕಾಂಗ್ರೆಸ್ ಸದನದ ಕಾರ್ಯ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದು, ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸುವ ಮೂಲಕ ಅಮೂಲ್ಯ ಸಮಯ ವ್ಯರ್ಥ ಮಾಡುತ್ತಿದೆ ಎಂದು ಟೀಕಿಸಿದರು. ಗಂಭೀರ ಚರ್ಚೆಗೆ ಒಳಪಡಬೇಕಾದ ವಿಷಯಗಳಿಂದ ಕಾಂಗ್ರೆಸ್ ದೂರ ಉಳಿಯುತ್ತಿದೆ ಎಂದರು.

ಕಳೆದ ಎರಡು-ಮೂರು ದಿನಗಳಲ್ಲಿ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್ ಹಾಗೂ ಮಾಜಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿದ್ಯಾರ್ಥಿಗಳು ಮತ್ತು ಸೋನಂ ವಾಂಗ್‌ಚುಕ್ ಅವರೊಂದಿಗೆ ಮಾತುಕತೆ ನಡೆಸಿದ್ದು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು ಹಾಗೂ ಸಮಗ್ರ ಚಿಂತನೆ ಅಗತ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಪಾತ್ರಾ ಹೇಳಿದರು.

ಕಾಂಗ್ರೆಸ್ ಈ ವಿಷಯದ ಕುರಿತು ಸದನದಲ್ಲಿ ಚರ್ಚೆ ನಡೆಸಲು ಆಸಕ್ತಿ ತೋರದೆ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಮಾತನಾಡಿ, ವಿದ್ಯಾರ್ಥಿಗಳ ಹಿತಾಸಕ್ತಿಯೇ ಎನ್‌ಡಿಎ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದರು. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಮಂತ್ರಿ ಸ್ಪಷ್ಟಪಡಿಸಿದ್ದು, ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande