ಮಾತೃಭೂಮಿಗಾಗಿ ಪ್ರಾಣ ಅರ್ಪಿಸಿದ ವೀರ ಯೋಧರಿಗೆ ನಮನ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, 26 ಜುಲೈ (ಹಿ.ಸ.): ಆ್ಯಂಕರ್: ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಮರ ವೀರ ಯೋಧರ ಬಲಿದಾನಕ್ಕೆ ಇಡೀ ದೇಶವೇ ಸದಾ ಚಿರಋಣಿಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಮರಿಸಿದ್ದಾರೆ. ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಂಗಳೂರಿನ ಜವಹರಲಾಲ್ ನೆಹರೂ ತಾರಾಲಯದ
cm-dk-shivakumar


ಬೆಂಗಳೂರು, 26 ಜುಲೈ (ಹಿ.ಸ.):

ಆ್ಯಂಕರ್:

ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಮರ ವೀರ ಯೋಧರ ಬಲಿದಾನಕ್ಕೆ ಇಡೀ ದೇಶವೇ ಸದಾ ಚಿರಋಣಿಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಮರಿಸಿದ್ದಾರೆ. ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಂಗಳೂರಿನ ಜವಹರಲಾಲ್ ನೆಹರೂ ತಾರಾಲಯದ ಬಳಿ ಇರುವ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ನಿರ್ದೇಶನಾಲಯದಿಂದ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಂಡರು. ಈ ವೇಳೆ ಹುತಾತ್ಮ ಯೋಧರಿಗೆ ಪುಷ್ಪಗುಚ್ಛವಿಟ್ಟು, ಗೌರವ ನಮನಗಳನ್ನು ಸಲ್ಲಿಸಿದರು.

ಯೋಧರ ತ್ಯಾಗವೇ ದೇಶದ ಸ್ವಾತಂತ್ರ್ಯದ ಬುನಾದಿ

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ದೇಶದ ಪ್ರತಿಷ್ಠೆ ಮತ್ತು ಭದ್ರತೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಸೈನಿಕರ ಸಾಹಸಗಾಥೆಯನ್ನು ಕೊಂಡಾಡಿದರು. ನಮ್ಮ ದೇಶದ ಸೈನಿಕರು ಹಗಲು-ರಾತ್ರಿ ಎನ್ನದೆ ಗಡಿಯಲ್ಲಿ ಕಾವಲು ಕಾಯುತ್ತಿರುವುದರಿಂದಲೇ ನಾವೆಲ್ಲರೂ ನೆಮ್ಮದಿಯಿಂದ ನಿದ್ರಿಸಲು ಸಾಧ್ಯವಾಗುತ್ತಿದೆ. ಯೋಧರ ಈ ತ್ಯಾಗವೇ ನಮ್ಮ ದೇಶದ ಸ್ವಾತಂತ್ರ್ಯ ಮತ್ತು ಭದ್ರತೆಯ ನಿಜವಾದ ಬುನಾದಿಯಾಗಿದೆ ಎಂದು ತಿಳಿಸಿದರು.

ಅಲ್ಲದೆ, ದೇಶದ ರಕ್ಷಣಾ ರಂಗಕ್ಕೆ ಕರ್ನಾಟಕ ರಾಜ್ಯವು ತನ್ನದೇ ಆದ ದೊಡ್ಡ ಕೊಡುಗೆಯನ್ನು ನೀಡುತ್ತ ಬಂದಿದೆ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು ದೇಶಕ್ಕಾಗಿ ಪ್ರಾಣತೆತ್ತ ವೀರಯೋಧರನ್ನು ಸ್ಮರಿಸಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande