ಬಾಗಲಕೋಟೆ: 125 ದಿನಗಳ ಉದ್ಯೋಗ ಖಾತರಿ ನೀಡುವ ವಿಬಿಜಿ ರಾಮ್ ಜಿ ಯೋಜನೆ ಜಾರಿ
ಬಾಗಲಕೋಟೆ, 28 ಜುಲೈ (ಹಿ.ಸ.): ಆ್ಯಂಕರ್ : ಗ್ರಾಮೀಣ ಪ್ರದೇಶದ ಕೂಲಿಕಾರರು ಹಾಗೂ ಬಡ ಕುಟುಂಬಗಳಿಗೆ ಕೇಂದ್ರ ಸರ್ಕಾರ ಮಹತ್ವದ ಕೊಡುಗೆಯಾಗಿ ಹೊಸ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಯೋಜನಾಧಿಕಾರಿ ಮಲ್ಲಿಕಾರ್ಜುನ ಹೊಸಮನಿ ತಿಳಿಸಿದರು. ಈ ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ವರ್ಷಕ್ಕೆ 125 ದಿನಗಳವರೆ
ಯೋಜನೆ


ಬಾಗಲಕೋಟೆ, 28 ಜುಲೈ (ಹಿ.ಸ.):

ಆ್ಯಂಕರ್ : ಗ್ರಾಮೀಣ ಪ್ರದೇಶದ ಕೂಲಿಕಾರರು ಹಾಗೂ ಬಡ ಕುಟುಂಬಗಳಿಗೆ ಕೇಂದ್ರ ಸರ್ಕಾರ ಮಹತ್ವದ ಕೊಡುಗೆಯಾಗಿ ಹೊಸ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಯೋಜನಾಧಿಕಾರಿ ಮಲ್ಲಿಕಾರ್ಜುನ ಹೊಸಮನಿ ತಿಳಿಸಿದರು.

ಈ ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ವರ್ಷಕ್ಕೆ 125 ದಿನಗಳವರೆಗೆ ಉದ್ಯೋಗ ಖಾತರಿ ನೀಡಲಾಗುತ್ತಿದ್ದು, ಹಿಂದಿನ 100 ದಿನಗಳ ಉದ್ಯೋಗ ಖಾತರಿಯನ್ನು 125 ದಿನಗಳಿಗೆ ವಿಸ್ತರಿಸಲಾಗಿದೆ. ಯೋಜನೆಯು ಗ್ರಾಮೀಣ ಕುಟುಂಬಗಳ ಆದಾಯ ಭದ್ರತೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ.

ಹೊಸ ಯೋಜನೆಯಡಿ ಈಗಾಗಲೇ ನರೇಗಾ ಅಡಿಯಲ್ಲಿ ನೋಂದಾಯಿಸಿಕೊಂಡಿರುವ ಫಲಾನುಭವಿಗಳ ಜಾಬ್ ಕಾರ್ಡ್ಗಳು ನಿಗದಿತ ಪರಿವರ್ತನಾ ಅವಧಿಯಲ್ಲಿ ಮಾನ್ಯವಾಗಲಿದ್ದು, ಅಗತ್ಯವಿದ್ದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಹೊಸ ಜಾಬ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ ನಂತರ ನಿಗದಿತ ಅವಧಿಯಲ್ಲಿ ಕೆಲಸ ಒದಗಿಸುವ ವ್ಯವಸ್ಥೆಯನ್ನು ಸರ್ಕಾರ ಮುಂದುವರಿಸಿದೆ.

ಯೋಜನೆಯಡಿ ಗ್ರಾಮ ಪಂಚಾಯಿತಿಗಳ ಮೂಲಕ ರಸ್ತೆ, ಕೆರೆ, ನೀರಿನ ಸಂರಕ್ಷಣೆ, ಗ್ರಾಮೀಣ ಮೂಲಸೌಕರ್ಯ, ಜೀವನೋಪಾಯ ಅಭಿವೃದ್ಧಿ ಸೇರಿದಂತೆ ವಿವಿಧ ಸಾರ್ವಜನಿಕ ಕಾಮಗಾರಿಗಳಲ್ಲಿ ಉದ್ಯೋಗ ನೀಡಲಾಗುತ್ತದೆ. ಗ್ರಾಮೀಣ ಅಭಿವೃದ್ಧಿಗೆ ಉತ್ತೇಜನ ನೀಡುವುದರ ಜೊತೆಗೆ ಬಡ ಕುಟುಂಬಗಳಿಗೆ ಸ್ಥಿರ ಆದಾಯ ಒದಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಜಾಬ್ ಕಾರ್ಡ್ ಪಡೆಯುವುದು ಹೇಗೆ?

ಗ್ರಾಮ ಪಂಚಾಯಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಹತಾ ಪರಿಶೀಲನೆಯ ನಂತರ ಜಾಬ್ ಕಾರ್ಡ್ ನೀಡಲಾಗುತ್ತದೆ. ಈಗಾಗಲೇ ಸಕ್ರಿಯ ಜಾಬ್ ಕಾರ್ಡ್ ಹೊಂದಿರುವವರಿಗೆ ಹೊಸ ಕಾರ್ಡ್ ಕಡ್ಡಾಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ದಿನಗೂಲಿ ದರ ಹೊಸ ಯೋಜನೆಯೊಂದಿಗೆ ಹಲವು ರಾಜ್ಯಗಳಲ್ಲಿ ದಿನಗೂಲಿ ದರವನ್ನು ಹೆಚ್ಚಿಸಲಾಗಿದ್ದು, ರಾಷ್ಟ್ರಮಟ್ಟದಲ್ಲಿ ಕನಿಷ್ಠ ₹300 ದಿನಗೂಲಿ ನಿಗದಿಪಡಿಸಲಾಗಿದೆ. ರಾಜ್ಯವಾರು ದರಗಳಲ್ಲಿ ವ್ಯತ್ಯಾಸ ಇರಬಹುದು.

ಯೋಜನೆಯ ಸಂಪೂರ್ಣ ಮಾಹಿತಿ, ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಹಾಗೂ ಜಾಬ್ ಕಾರ್ಡ್ ವಿವರಗಳನ್ನು ತಿಳಿಯಲು ಕೆಳಗಿನ ಲಿಂಕ್ಗೆ ಭೇಟಿ ನೀಡಬಹುದು:

🔗 **https://mahitichakra.in/vb-g-ram-g-yojana-karnataka-2026

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande