
ಬೆಂಗಳೂರು, 28 ಜುಲೈ (ಹಿ.ಸ.):
ಆ್ಯಂಕರ್:
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ನಟ ಧನ್ವೀರ್ ಹಲವು ತಿಂಗಳ ಬಳಿಕ ಭೇಟಿಯಾಗಿದ್ದು, ಇಬ್ಬರ ನಡುವೆ ಅಂತರ ಉಂಟಾಗಿದೆ ಎಂಬ ವದಂರಿಗೆ ಈ ಭೇಟಿ ತೆರೆ ಎಳೆದಿದೆ.
ಇತ್ತೀಚೆಗೆ ಧನ್ವೀರ್ ವಿರುದ್ಧ ₹10 ಕೋಟಿ ಹಣಕಾಸು ವಹಿವಾಟು ಮತ್ತು ವಂಚನೆಗೆ ಸಂಬಂಧಿಸಿದ ಆರೋಪಗಳು ಕೇಳಿಬಂದಿದ್ದವು. ಜೊತೆಗೆ ಕುಟುಂಬದಿಂದ ದೂರವಿದ್ದಾರೆ ಎಂಬ ಸುದ್ದಿಗಳೂ ಹರಿದಾಡಿದ್ದವು. ಈ ಬೆಳವಣಿಗೆಗಳ ನಡುವೆಯೇ ಧನ್ವೀರ್ ಜೈಲಿಗೆ ತೆರಳಿ ದರ್ಶನ್ ಅವರನ್ನು ಭೇಟಿಯಾಗಿರುವುದು ಚಿತ್ರರಂಗದ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII