



ರಾಯಚೂರು, 04 ಜುಲೈ (ಹಿ.ಸ.)
ಆ್ಯಂಕರ್: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಗ್ನಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲು ಮಾಕ್ಡ್ರಿಲ್ ಪ್ರದರ್ಶನವನ್ನು ಹಮ್ಮಿಕೊಳ್ಳಲು ಸೂಚಿಸಿರುವುದರಿಂದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರವೀಂದ್ರ ಎ ಘಾಟಗೆ ಹಾಗೂ ಅಗ್ನಿಶಾಮಕ ಠಾಣಾಧಿಕಾರಿ ರಾಜು ಅವರು ನೇತೃತ್ವದಲ್ಲಿ ರಾಯಚೂರಿನ ನವೋದಯ ಸೆಂಟ್ರಲ್ ಶಾಲೆಯ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹಾಗೂ 50 ಶಿಕ್ಷಕರಿಗೆ ಅಗ್ನಿ ಅನಾಹುತಗಳ ಬಗ್ಗೆ ಅಣುಕು ಪ್ರದರ್ಶನವನ್ನು ತೋರಿಸಿ ಹಾಗೂ ಜಾಗೃತಿ ಮೂಡಿಸಿ ಮತ್ತು ಮುನ್ನಚ್ಚರಿಕೆ ಕ್ರಮಗಳ ಕುರಿತು ಮಾಕ್ಡ್ರಿಲ್ ಹಮ್ಮಿಕೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿಗಳು, ನವೋದಯ ಸೆಂಟ್ರಲ್ ಶಾಲೆಯ ಮುಖ್ಯಗುರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್