
ಬೆಂಗಳೂರು, 10 ಆಗಸ್ಟ್ (ಹಿ.ಸ.):
ಆ್ಯಂಕರ್:ರಾಷ್ಟ್ರಧ್ವಜವು ಪ್ರತಿಯೊಬ್ಬ ಭಾರತೀಯನಲ್ಲೂ ಐಕ್ಯತೆ, ಹೆಮ್ಮೆ ಹಾಗೂ ದೇಶಭಕ್ತಿಯ ಮನೋಭಾವ ಮೂಡಿಸುವ ರಾಷ್ಟ್ರೀಯ ಗೌರವದ ಸಂಕೇತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಮಲ್ಲೇಶ್ವರಂನ ಸರ್ಕಾರಿ ಶಾಲೆ ಆವರಣದಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಭವ್ಯ ತ್ರಿವರ್ಣ ಯಾತ್ರೆಗೆ ನೂರಾರು ಕಾರ್ಯಕರ್ತರು ಹಾಗೂ ನಾಗರಿಕರೊಂದಿಗೆ ವಿಜಯೇಂದ್ರ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟ್ರಧ್ವಜವನ್ನು ಎತ್ತಿ ಹಿಡಿದು ದೇಶದ ಏಕತೆ ಮತ್ತು ಅಖಂಡತೆಯನ್ನು ಬಲಪಡಿಸುವುದರೊಂದಿಗೆ ವಿಕಸಿತ ಭಾರತ ನಿರ್ಮಾಣದತ್ತ ಎಲ್ಲರೂ ಒಂದಾಗಿ ಮುನ್ನಡೆಯಬೇಕು ಎಂದು ವಿಜಯೇಂದ್ರ ಕರೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.