
ಬಳ್ಳಾರಿ, 11 ಆಗಸ್ಟ್ (ಹಿ.ಸ.)
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಶ್ರೀ ಅಲ್ಲೀಪುರ ಮಹಾದೇವ ತಾತನವರ ಟ್ರಸ್ಟ್ ಕಮಿಟಿ ಇವರ ಸಹಯೋಗದೊಂದಿಗೆ ಆಗಷ್ಟ್ 12 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಅಲ್ಲೀಪುರ ಮಹಾದೇವ ತಾತನವರ ಮಠ, ಅಲ್ಲೀಪುರದಲ್ಲಿ ಸಾರ್ವಜನಿಕರಿಗಾಗಿ ಬೃಹತ್ ಉಚಿತ ಆಯುಷ್ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.
ಸಾರ್ವಜನಿಕರು ಈ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆಯುಷ್ ಇಲಾಖೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್