ರಾಹುಲ್ ಗಾಂಧಿ ಪಲಾಯನವಾದಿ:ಕಂಗನಾ ರಣಾವತ್
ನವದೆಹಲಿ, 11 ಆಗಸ್ಟ್ (ಹಿ.ಸ.): ಆ್ಯಂಕರ್:ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಮುಂದುವರಿದಿರುವ ಸಂಘರ್ಷದ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್‌ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
कंगना रनौत (फाइल फोटो)


ನವದೆಹಲಿ, 11 ಆಗಸ್ಟ್ (ಹಿ.ಸ.):

ಆ್ಯಂಕರ್:ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಮುಂದುವರಿದಿರುವ ಸಂಘರ್ಷದ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್‌ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸಂಸತ್‌ ಭವನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ, ಪ್ರತಿಪಕ್ಷಗಳು ಆರಂಭದಲ್ಲಿ ಸದನದಲ್ಲಿ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿ ಗದ್ದಲ ಮಾಡುತ್ತಿದ್ದವು. ಇದೀಗ ಚರ್ಚೆಗೆ ಅವಕಾಶ ದೊರೆಯುತ್ತಿದ್ದಂತೆ ಅದರಿಂದ ಹಿಂದೆ ಸರಿಯುತ್ತಿವೆ ಎಂದು ಆರೋಪಿಸಿದರು.

“ಚರ್ಚೆಗಾಗಿ ಇಷ್ಟು ದಿನ ಗದ್ದಲ ಮಾಡಿದವರು, ಈಗ ಚರ್ಚೆ ನಡೆಯಲಿದೆ ಎಂದಾಗ ಹಿಂದೆ ಸರಿಯುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಮಾತು ಕೇಳಲು ಅವರು ಸಿದ್ಧರಿಲ್ಲ. ಹೀಗಾದರೆ ಸದನ ಹೇಗೆ ನಡೆಯಬೇಕು?” ಎಂದು ಪ್ರಶ್ನಿಸಿದರು.

ಪ್ರತಿಪಕ್ಷಗಳ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ದೇಶವೇ ಪ್ರತಿಪಕ್ಷಗಳ ವರ್ತನೆಯನ್ನು ಗಮನಿಸುತ್ತಿದೆ. ಪ್ರತಿಪಕ್ಷಗಳು ರಾಷ್ಟ್ರವಿರೋಧಿ ಶಕ್ತಿಗಳ ಕೈಗೆ ಸಿಲುಕಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಆರೋಪಿಸಿದರು. ಮುಂಗಾರು ಅಧಿವೇಶನದಲ್ಲಿ ಒಂದೇ ದಿನವೂ ಸದನದ ಕಲಾಪವನ್ನು ಸುಗಮವಾಗಿ ನಡೆಸಲು ಅವಕಾಶ ನೀಡಿಲ್ಲ ಎಂದು ದೂರಿದರು.

ಗೃಹ ಸಚಿವರ ಉತ್ತರಕ್ಕೆ ಸರ್ಕಾರ ಸಿದ್ಧ

ಮುಂಗಾರು ಅಧಿವೇಶನದಲ್ಲಿ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ನಿರಂತರ ವಾಗ್ವಾದ ನಡೆಯುತ್ತಿದೆ. ಹಲವು ವಿಷಯಗಳ ಕುರಿತು ತಕ್ಷಣ ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದು, ಸದನದಲ್ಲಿ ಪ್ರತಿಭಟನೆ ಮತ್ತು ಗದ್ದಲ ನಡೆಸುತ್ತಿವೆ.

ಇದಕ್ಕೆ ಪ್ರತಿಯಾಗಿ ಸರ್ಕಾರ, ನಿಯಮಗಳ ಪ್ರಕಾರ ಸಂಬಂಧಿಸಿದ ಎಲ್ಲ ವಿಚಾರಗಳ ಕುರಿತು ಚರ್ಚೆಗೆ ಸಿದ್ಧವಿದ್ದು, ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಉತ್ತರ ನೀಡಲಾಗುವುದು ಎಂದು ಹೇಳಿದೆ.

ರಾಹುಲ್‌ ಗಾಂಧಿ ಅವರು ಕೇಂದ್ರ ಗೃಹ ಸಚಿವರು ಸದನದಲ್ಲಿ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದ ವಿಚಾರಕ್ಕೂ ಸರ್ಕಾರ ಒಪ್ಪಿಗೆ ನೀಡಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು, ಗೃಹ ಸಚಿವರು ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರಿಸಲಿದ್ದಾರೆ. ಆದರೆ ಅದಕ್ಕೂ ಮೊದಲು ಪ್ರತಿಪಕ್ಷಗಳು ಗದ್ದಲ ನಿಲ್ಲಿಸಿ ಸದನದ ಕಲಾಪ ಸುಗಮವಾಗಿ ನಡೆಯಲು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಈ ಸಂಘರ್ಷದಿಂದ ಮುಂಗಾರು ಅಧಿವೇಶನದ ಕಲಾಪಕ್ಕೆ ನಿರಂತರ ಅಡ್ಡಿಯಾಗುತ್ತಿದ್ದು, ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande