
ಕೊಪ್ಪಳ, 12 ಆಗಸ್ಟ್ (ಹಿ.ಸ.)
ಆ್ಯಂಕರ್ : ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯವು 2024-25ನೇ ಸಾಲಿನಲ್ಲಿ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಮೂರು ಪ್ರತಿಷ್ಠಿತ ರ್ಯಾಂಕ್ಗಳನ್ನು ಪಡೆದುಕೊಂಡಿದೆ.
ಬಿ.ಎ. ತರಗತಿಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿನಿ ಕು. ಕೀರ್ತಿ ವಿರೇಶ ಕೊಪ್ಪಳ ಇವರು 7ನೇ ರ್ಯಾಂಕ್ ಗಳಿಸಿದರೆ, ಬಿ.ಎಸ್ಸಿ ತರಗತಿಯಲ್ಲಿ ವ್ಯಾಸಂಗ ಮಾಡಿದ ಕು. ಸರಸ್ವತಿ ಶರಣಪ್ಪ ಹುಡೇದ 4ನೇ ರ್ಯಾಂಕ್ ಮತ್ತು ಕು. ಹಿಮಬಿಂದು ಸೋಮಪ್ಪ ಅವರು 8ನೇ ರ್ಯಾಂಕ್ ಪಡೆದುಕೊಂಡಿರುತ್ತಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್