
ಬೆಂಗಳೂರು, 12 ಆಗಸ್ಟ್ (ಹಿ.ಸ.):
ಆ್ಯಂಕರ್:ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರ ಕುಂದುಕೊರತೆ, ಸಲಹೆ ಹಾಗೂ ವಿವಿಧ ನಾಗರಿಕ ಸಮಸ್ಯೆಗಳನ್ನು ಆಲಿಸಲು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ. ಅವರು ದೂರವಾಣಿ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.
ಆಗಸ್ಟ್ 13ರಂದು ಗುರುವಾರ ಸಂಜೆ 5ರಿಂದ 6 ಗಂಟೆಯವರೆಗೆ ದೂರವಾಣಿ ಮೂಲಕ ನಾಗರಿಕರೊಂದಿಗೆ ಸಂವಾದ ನಡೆಯಲಿದೆ. ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ನಿವಾಸಿಗಳು ತಮ್ಮ ಪ್ರದೇಶದ ನಾಗರಿಕ ಸಮಸ್ಯೆಗಳು, ಸಲಹೆಗಳು ಹಾಗೂ ಇತರ ಅಹವಾಲುಗಳನ್ನು ಆಯುಕ್ತರ ಗಮನಕ್ಕೆ ತರಲು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.
ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಆಯೋಜಿಸಿರುವ ಈ ದೂರವಾಣಿ ಸಂವಾದದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.