
ಬಳ್ಳಾರಿ, 17 ಆಗಸ್ಟ್ (ಹಿ.ಸ.)
ಆ್ಯಂಕರ್ : ಜೆಸ್ಕಾಂ ನಗರ ಉಪವಿಭಾಗ-2 ರ ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕೀರ್ಣದ ವಿದ್ಯುತ್ ಲೈನಿನ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಈ ವ್ಯಾಪ್ತಿಯ ಫೀಡರ್-6 ಮತ್ತು 14 ರ 11 ಕೆ.ವಿ. ಫೀಡರ್ ನಲ್ಲಿ ಆಗಸ್ಟ್ 18 ರಂದು ಬೆಳಿಗ್ಗೆ 09 ರಿಂದ 05 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-6: ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ.
ಎಫ್-14: ಜಿಲ್ಲಾ ಕೋರ್ಟ್ ಸಂಕೀರ್ಣ. ಹಾಗಾಗಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್