ಹಿ.ಪ್ರ. 5 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ: ಉತ್ತರ ನೀಡುವಂತೆ ರಾಹುಲ್ ಗಾಂಧಿಗೆ ಅನುರಾಗ್ ಠಾಕೂರ್ ಆಗ್ರಹ
ನವದೆಹಲಿ, 27 ಆಗಸ್ಟ್ (ಹಿ.ಸ.): ಆ್ಯಂಕರ್:ಭಾರತೀಯ ಆರ್ಥಿಕತೆ ಮತ್ತು ಹಿಮಾಚಲ ಪ್ರದೇಶದ ಉದ್ಯೋಗದ ವಿಚಾರವಾಗಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರ
अनुराग ठाकुर फाइल फोटो


ನವದೆಹಲಿ, 27 ಆಗಸ್ಟ್ (ಹಿ.ಸ.):

ಆ್ಯಂಕರ್:ಭಾರತೀಯ ಆರ್ಥಿಕತೆ ಮತ್ತು ಹಿಮಾಚಲ ಪ್ರದೇಶದ ಉದ್ಯೋಗದ ವಿಚಾರವಾಗಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಇಂದು ಪ್ರಮುಖ ಆರ್ಥಿಕತೆಗಳ ಪೈಕಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ಇಡೀ ವಿಶ್ವ ಭಾರತವನ್ನು ಭರವಸೆಯಿಂದ ನೋಡುತ್ತಿದೆ ಎಂದು ಹೇಳಿದರು.

ಭಾರತ ಮತ್ತಷ್ಟು ಅಭಿವೃದ್ಧಿ ಹೊಂದಿದರೆ ಅದರ ಪ್ರಯೋಜನ ಇಡೀ ಜಗತ್ತಿಗೆ ದೊರೆಯಲಿದೆ. ರಾಹುಲ್ ಗಾಂಧಿ ಸುಳ್ಳು ಹೇಳುವುದನ್ನು ಹಾಗೂ ವಿದೇಶಗಳಿಂದ ಬರುವ ಮಾಹಿತಿಯ ಆಧಾರದ ಮೇಲೆ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಅನುರಾಗ್ ಠಾಕೂರ್ ಟೀಕಿಸಿದರು.

ಹಿಮಾಚಲ ಪ್ರದೇಶದಲ್ಲಿ ಐದು ಲಕ್ಷ ಸರ್ಕಾರಿ ಉದ್ಯೋಗ ನೀಡುವುದಾಗಿ ನೀಡಿದ್ದ ಚುನಾವಣಾ ಭರವಸೆಯ ಬಗ್ಗೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸ್ಪಷ್ಟ ಉತ್ತರ ನೀಡಬೇಕು ಎಂದು ಅವರು ಆಗ್ರಹಿಸಿದರು. ವಿಶೇಷವಾಗಿ ಯುವಜನರಿಗೆ ಉದ್ಯೋಗದ ವಿಚಾರದಲ್ಲಿ ನೀಡಿದ್ದ ಭರವಸೆಗಳ ಸ್ಥಿತಿ ಏನಾಗಿದೆ ಎಂಬುದನ್ನು ಕಾಂಗ್ರೆಸ್ ತಿಳಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರದ ಆರ್ಥಿಕ ಸಮೀಕ್ಷೆ 2025-26ರ ಪ್ರಕಾರ, ಭಾರತ ಸತತ ನಾಲ್ಕನೇ ವರ್ಷ ಪ್ರಮುಖ ಆರ್ಥಿಕತೆಗಳ ಪೈಕಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ಇದೇ ವೇಳೆ ಹಿಮಾಚಲ ಪ್ರದೇಶದಲ್ಲಿ ಉದ್ಯೋಗ ಹಾಗೂ ಸರ್ಕಾರಿ ನೇಮಕಾತಿ ವಿಚಾರವಾಗಿ ಬಿಜೆಪಿ ಕಾಂಗ್ರೆಸ್ ಸರ್ಕಾರವನ್ನು ನಿರಂತರವಾಗಿ ಪ್ರಶ್ನಿಸುತ್ತಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande