
ಬಳ್ಳಾರಿ, 29 ಆಗಸ್ಟ್ (ಹಿ.ಸ.)
ಆ್ಯಂಕರ್ : ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ-2 ರ ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕೀರ್ಣದ ವಿದ್ಯುತ್ ಲೈನಿನ ನಿರ್ವಹಣೆ ಕಾರ್ಯವನ್ನು ಕೈಗೊಳ್ಳುತ್ತಿರುವುರಿಂದ ಆಗಸ್ಟ್ 30 ರಂದು ಬೆಳಿಗ್ಗೆ 09 ರಿಂದ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-6 ಮಾರ್ಗದ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ ಮತ್ತು ಎಫ್-14 ಮಾರ್ಗದ ಜಿಲ್ಲಾ ಕೋರ್ಟ್ ಸಂಕೀರ್ಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ವಿ) ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್