
ನವದೆಹಲಿ, 10 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಭಾರತ–ಜಪಾನ್ ರಕ್ಷಣಾ ಸಹಭಾಗಿತ್ವದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ.
ಜಪಾನ್ ವಾಯು ಆತ್ಮರಕ್ಷಣಾ ಪಡೆಯ ಯುದ್ಧವಿಮಾನಗಳು ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವುದು ಉಭಯ ದೇಶಗಳ ನಡುವಿನ ಹೆಚ್ಚುತ್ತಿರುವ ವಿಶ್ವಾಸ ಹಾಗೂ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುವ ಹಂಚಿಕೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ತಿಂಗಳು ನವದೆಹಲಿಯಲ್ಲಿ ನಡೆದ ಫಲಪ್ರದ ಮಾತುಕತೆಗಳ ಬಳಿಕ, ‘ವೀರ್ ಗಾರ್ಡಿಯನ್’ ಸೇರಿದಂತೆ ಪರಸ್ಪರ ಭೇಟಿಗಳು ಹಾಗೂ ಜಂಟಿ ಚಟುವಟಿಕೆಗಳು ಭಾರತ–ಜಪಾನ್ ನಡುವಿನ ರಕ್ಷಣಾ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತಿವೆ ಎಂದು ರಾಜನಾಥ ಸಿಂಗ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹೇಳಿದ್ದಾರೆ.
ಭಾರತ ಮತ್ತು ಜಪಾನ್ ನಡುವಿನ ರಕ್ಷಣಾ ಸಹಭಾಗಿತ್ವವು ಪರಸ್ಪರ ವಿಶ್ವಾಸ ಹಾಗೂ ಸಹಕಾರದ ಮೂಲಕ ಮತ್ತಷ್ಟು ಗಟ್ಟಿಯಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.