
ಬಳ್ಳಾರಿ, 11 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್: ಪರಮಪೂಜ್ಯ ಹಾನಗಲ್ಲು ಶ್ರೀ ಕುಮಾರೇಶ್ವರ ಮಹಾಸ್ವಾಮಿಗಳ 159ನೇ ಜಯಂತೋತ್ಸವವನ್ನು ಶ್ರದ್ಧೆ - ಭಕ್ತಿಯಿಂದ ಹೆಚ್.ಎಸ್.ಕೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶುಕ್ರವಾರ ಆಚರಿಸಲಾಯಿತು.
ಹೆಚ್.ಎಸ್.ಕೆ ಪಾಲಿಟೆಕ್ನಿಕ್ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಪಲ್ಲೇದ ಪ್ರಭುಲಿಂಗ ಅವರು ಶ್ರೀ ಹಾನಗಲ್ಲು ಕುಮಾರೇಶ್ವರರ ಭಾವಚಿತ್ರಕ್ಕೆ ಪುಷ್ಪಗಳನ್ನು ಸಮರ್ಪಿಸುವ ಮೂಲಕ ಜಯಂತಿಯ ಆಚರಣೆಗೆ ಚಾಲನೆ ನೀಡಿದರು.
ಹೆಚ್.ಎಸ್.ಕೆ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಬಿ. ಶ್ರೀಶೈಲಗೌಡ ಹಾಗೂ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್