
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಅರಣ್ಯ ಸಂಪತ್ತು, ವನ್ಯಜೀವಿಗಳು ಹಾಗೂ ಪರಿಸರ ಸಂರಕ್ಷಣೆ ಸೇರಿದಂತೆ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಬಲಿದಾನಗೈದ ಅರಣ್ಯ ಸಿಬ್ಬಂದಿಯನ್ನು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದಂದು ಗೌರವಪೂರ್ವಕವಾಗಿ ಸ್ಮರಿಸುವುದಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಹೇಳಿಕೆ ನೀಡಿರುವ ಅವರು, ಅರಣ್ಯ ಸಿಬ್ಬಂದಿಯ ತ್ಯಾಗ, ಕರ್ತವ್ಯನಿಷ್ಠೆ ಮತ್ತು ಸೇವಾ ಮನೋಭಾವ ನಮ್ಮೆಲ್ಲರಿಗೂ ಸದಾ ಸ್ಫೂರ್ತಿಯಾಗಿರಲಿ ಎಂದು ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.