
ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಬೆಂಗಳೂರಿನ ಜೋಶಿ ಸಂಗೀತ, ನೃತ್ಯ ಹಾಗೂ ನಾಟಕ ಶಾಲೆಯ ವತಿಯಿಂದ ಶ್ರೀ ರಾಮ ಆಂಜನೇಯ ಗುಡ್ಡ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಪರಿಸರ ಸ್ನೇಹಿ ಗಣಪತಿ ಕಾರ್ಯಾಗಾರದಲ್ಲಿ ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ಉಪನಾಯಕರು, ಜೆಡಿಎಸ್ ಶಾಸಕಾಂಗ ಪಕ್ಷದ ಶ್ರೀ ಟಿ.ಎ. ಶರವಣ ಅವರು ಭಾಗವಹಿಸಿದರು.
ಕಾರ್ಯಾಗಾರದಲ್ಲಿ ಮಕ್ಕಳೊಂದಿಗೆ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನು ತಯಾರಿಸುವ ಚಟುವಟಿಕೆಯಲ್ಲಿ ಭಾಗವಹಿಸಿ, ಪರಿಸರ ಸಂರಕ್ಷಣೆ ಹಾಗೂ ಮಣ್ಣಿನ ಗಣಪತಿ ಮೂರ್ತಿಗಳ ಮಹತ್ವದ ಕುರಿತು ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಟಿ.ಎ. ಶರವಣ ಅವರು, ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸುವುದರ ಜೊತೆಗೆ ಪರಿಸರದ ಮೇಲಿನ ನಮ್ಮ ಜವಾಬ್ದಾರಿಯನ್ನೂ ಅರಿತುಕೊಳ್ಳಬೇಕು. ರಾಸಾಯನಿಕ ಬಣ್ಣಗಳು ಹಾಗೂ ಪರಿಸರಕ್ಕೆ ಹಾನಿಕಾರಕ ವಸ್ತುಗಳಿಂದ ತಯಾರಿಸಿದ ಮೂರ್ತಿಗಳ ಬದಲಿಗೆ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ಬಳಸುವ ಮೂಲಕ ಜಲಮೂಲಗಳು ಹಾಗೂ ಪ್ರಕೃತಿಯನ್ನು ಸಂರಕ್ಷಿಸಬಹುದು ಎಂದು ಹೇಳಿದರು.
ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯ. ಪರಿಸರ ಸ್ನೇಹಿ ಆಚರಣೆಗಳಿಗೆ ಉತ್ತೇಜನ ನೀಡುವ ಇಂತಹ ಕಾರ್ಯಾಗಾರಗಳು ಜನರಲ್ಲಿ ಜಾಗೃತಿ ಮೂಡಿಸಿ, ಹಸಿರು ಮತ್ತು ಸ್ವಚ್ಛ ಪರಿಸರ ನಿರ್ಮಾಣಕ್ಕೆ ಸಹಕಾರಿಯಾಗಲಿ ಎಂದು ಅವರು ಹಾರೈಸಿದರು.
ಕಾರ್ಯಾಗಾರದಲ್ಲಿ ಅತ್ಯುತ್ತಮವಾಗಿ ಗಣಪತಿ ಮೂರ್ತಿಗಳನ್ನು ತಯಾರಿಸಿದ ಮೂವರು ಮಕ್ಕಳಿಗೆ ಶ್ರೀ ಟಿ.ಎ. ಶರವಣ ಅವರು ಪ್ರಶಸ್ತಿ ಹಾಗೂ ನಗದು ಬಹುಮಾನ ನೀಡಿ ಅಭಿನಂದಿಸಿದರು.
ಕಾರ್ಯಾಗಾರದಲ್ಲಿ ಜೋಶಿ ಸಂಗೀತ, ನೃತ್ಯ ಹಾಗೂ ನಾಟಕ ಶಾಲೆಯ ಪದಾಧಿಕಾರಿಗಳು, ಶಿಕ್ಷಕರು, ಮಕ್ಕಳು, ಪೋಷಕರು ಹಾಗೂ ಪರಿಸರಾಸಕ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.