ಡಿಯುಟಿಎ ಮಾಜಿ ಅಧ್ಯಕ್ಷ ಆದಿತ್ಯ ನಾರಾಯಣ ಮಿಶ್ರಾ ಸೇರಿದಂತೆ ಹಲವು ಶಿಕ್ಷಣ ತಜ್ಞರು ಕಾಂಗ್ರೆಸ್ ಸೇರ್ಪಡೆ
ನವದೆಹಲಿ, 14 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೆಹಲಿ ವಿಶ್ವವಿದ್ಯಾಲಯ ಶಿಕ್ಷಕರ ಸಂಘದ (ಡಿಯುಟಾ) ಮೂರು ಬಾರಿ ಅಧ್ಯಕ್ಷರಾಗಿದ್ದ ಡಾ. ಆದಿತ್ಯ ನಾರಾಯಣ ಮಿಶ್ರಾ ಸೇರಿದಂತೆ ಹಲವು ಶಿಕ್ಷಣ ತಜ್ಞರು ಹಾಗೂ ಬುದ್ಧಿಜೀವಿಗಳು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲ
नई दिल्ली में कांग्रेस मुख्यालय में दिल्ली विश्वविद्यालय शिक्षक संघ (डूटा) के पूर्व अध्यक्ष डॉ. आदित्य नारायण मिश्रा और अन्य शिक्षाविदों के कांग्रेस में शामिल होने के दौरान पार्टी नेता काजी निजामुद्दीन, देवेंद्र यादव और राजेंद्र पाल गौतम।


ನವದೆಹಲಿ, 14 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ದೆಹಲಿ ವಿಶ್ವವಿದ್ಯಾಲಯ ಶಿಕ್ಷಕರ ಸಂಘದ (ಡಿಯುಟಾ) ಮೂರು ಬಾರಿ ಅಧ್ಯಕ್ಷರಾಗಿದ್ದ ಡಾ. ಆದಿತ್ಯ ನಾರಾಯಣ ಮಿಶ್ರಾ ಸೇರಿದಂತೆ ಹಲವು ಶಿಕ್ಷಣ ತಜ್ಞರು ಹಾಗೂ ಬುದ್ಧಿಜೀವಿಗಳು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೆಹಲಿ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ಕಾಜಿ ನಿಜಾಮುದ್ದೀನ್, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಹಾಗೂ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ರಾಜೇಂದ್ರ ಪಾಲ್ ಗೌತಮ್ ಅವರು ನೂತನ ಸದಸ್ಯರಿಗೆ ಪಕ್ಷದ ಶಾಲು ಹೊದಿಸಿ ಕಾಂಗ್ರೆಸ್‌ಗೆ ಬರಮಾಡಿಕೊಂಡರು.

ಕಾಂಗ್ರೆಸ್ ಸದಸ್ಯತ್ವ ಸ್ವೀಕರಿಸಿದ ಬಳಿಕ ಮಾತನಾಡಿದ ಡಾ. ಆದಿತ್ಯ ನಾರಾಯಣ ಮಿಶ್ರಾ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಕೈ ಬಲಪಡಿಸುವ ಉದ್ದೇಶದಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವುದಾಗಿ ಹೇಳಿದರು. ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಮೇಲೆ ನಡೆಯುತ್ತಿರುವ ವ್ಯವಸ್ಥಿತ ದಾಳಿಗಳ ವಿರುದ್ಧ ರಾಹುಲ್ ಗಾಂಧಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ ಎಂದು ತಿಳಿಸಿದರು.

ಸರ್ಕಾರದ ಆರ್ಥಿಕ ನೆರವು ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳನ್ನು ರಕ್ಷಿಸುವುದು ಹಾಗೂ ಎಲ್ಲ ವರ್ಗಗಳಿಗೂ ಶಿಕ್ಷಣದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಖಚಿತಪಡಿಸುವ ಹೋರಾಟದಲ್ಲಿ ತಾವು ಸಹ ಭಾಗಿಯಾಗಲು ಕಾಂಗ್ರೆಸ್ ಸೇರಿರುವುದಾಗಿ ಮಿಶ್ರಾ ಹೇಳಿದರು.

ದೇಶಾದ್ಯಂತ ಸಾವಿರಾರು ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮುಚ್ಚಲಾಗುತ್ತಿದ್ದು, ಇದೀಗ ಉನ್ನತ ಶಿಕ್ಷಣವೂ ಇದೇ ರೀತಿಯ ಗಂಭೀರ ಬಿಕ್ಕಟ್ಟಿನತ್ತ ಸಾಗುತ್ತಿದೆ ಎಂದು ಅವರು ಆರೋಪಿಸಿದರು.

ನೂತನ ಸದಸ್ಯರನ್ನು ಸ್ವಾಗತಿಸಿದ ರಾಜೇಂದ್ರ ಪಾಲ್ ಗೌತಮ್, ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸಾರ್ವಜನಿಕ ಶಿಕ್ಷಣವನ್ನು ರಕ್ಷಿಸುವ ಸಂಕಲ್ಪದೊಂದಿಗೆ ಡಾ. ಮಿಶ್ರಾ ಮತ್ತು ಅವರ ಸಹೋದ್ಯೋಗಿಗಳು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.

ದೆಹಲಿ ವಿಶ್ವವಿದ್ಯಾಲಯದಲ್ಲಿ ಆಡಳಿತಾರೂಢ ವಿಚಾರಧಾರೆಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಭಾರಿ ಮೊತ್ತದ ಹಣವನ್ನು ಖರ್ಚು ಮಾಡಲಾಗುತ್ತಿದೆ ಎಂದು ಆರೋಪಿಸಿದ ಗೌತಮ್, ಅದೇ ಹಣವನ್ನು ವಿದ್ಯಾರ್ಥಿಗಳಿಗಾಗಿ ವಸತಿ ನಿಲಯಗಳು ಹಾಗೂ ಮೂಲಸೌಕರ್ಯ ಕಲ್ಪಿಸಲು ಬಳಸಬಹುದಾಗಿತ್ತು ಎಂದು ಹೇಳಿದರು. ಶಿಕ್ಷಣವನ್ನು ದುಬಾರಿಗೊಳಿಸಿರುವ ಪರಿಣಾಮ ಸಾಮಾನ್ಯ ಮತ್ತು ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯುವುದು ಅತ್ಯಂತ ಕಷ್ಟಕರವಾಗಿದೆ ಎಂದು ತಿಳಿಸಿದರು.

ದೆಹಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಮಾತನಾಡಿ, ಡಾ. ಆದಿತ್ಯ ನಾರಾಯಣ ಮಿಶ್ರಾ ಅವರ ದೀರ್ಘಕಾಲದ ಶೈಕ್ಷಣಿಕ ಹಾಗೂ ಸಂಘಟನಾ ಅನುಭವವು ಯುವಜನರು ಮತ್ತು ವಿದ್ಯಾರ್ಥಿಗಳಿಗೆ ಸರಿಯಾದ ದಿಕ್ಕು ತೋರಿಸಲು ಸಹಕಾರಿಯಾಗಲಿದೆ ಎಂದರು.

ದೆಹಲಿ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ಕಾಜಿ ನಿಜಾಮುದ್ದೀನ್ ಮಾತನಾಡಿ, ಇಂದಿನ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದು ಪ್ರತಿಭಟಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೋರಾಟದ ವೇಳೆ ಲಾಠಿ ಏಟು ಎದುರಿಸುವುದರ ಜೊತೆಗೆ ಪೊಲೀಸ್ ಠಾಣೆಗಳಿಗೆ ಅಲೆಯಬೇಕಾದ ಸ್ಥಿತಿ ಇದೆ ಎಂದು ಹೇಳಿದರು. ಇಂತಹ ಸಂದರ್ಭದಲ್ಲಿ ಪ್ರಬುದ್ಧ ಶಿಕ್ಷಣ ತಜ್ಞರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವುದು ಶಿಕ್ಷಣದ ಹಕ್ಕಿನ ಹೋರಾಟಕ್ಕೆ ಸೈದ್ಧಾಂತಿಕವಾಗಿ ಮತ್ತಷ್ಟು ಬಲ ನೀಡಲಿದೆ ಎಂದು ತಿಳಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande