
ಬೆಂಗಳೂರು, 14 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಸಚಿವ ಡಾ. ಅಜಯ್ ಧರ್ಮಸಿಂಗ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬದ ಸದಸ್ಯರೊಂದಿಗೆ ಗೌರಿ–ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಮನೆಯ ಹಿರಿಯರ ಆಶೀರ್ವಾದ ಪಡೆದು, ತಾಯಿ ಗೌರಿ ಹಾಗೂ ಗಣಪತಿ ಮೂರ್ತಿಯನ್ನು ಭಕ್ತಿಭಾವದಿಂದ ಬರಮಾಡಿಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬದ ಸದಸ್ಯರು ಪೂಜೆಯಲ್ಲಿ ಪಾಲ್ಗೊಂಡು ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು.
ವಿಘ್ನವಿನಾಶಕ ಗಣೇಶ ಹಾಗೂ ತಾಯಿ ಗೌರಿಯ ಕೃಪೆಯಿಂದ ನಾಡಿನ ಸಮಸ್ತ ಜನತೆಗೆ ಆರೋಗ್ಯ, ಸಂತೋಷ, ನೆಮ್ಮದಿ ಮತ್ತು ಸಮೃದ್ಧಿ ದೊರೆಯಲಿ ಎಂದು ಡಾ. ಅಜಯ್ ಧರ್ಮಸಿಂಗ್ ಪ್ರಾರ್ಥಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.