

ಬಳ್ಳಾರಿ, 18 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಭಾರತೀಯ ಜನತಾ ಪಾರ್ಟಿಯ ಬಳ್ಳಾರಿ ನಗರ ಮಂಡಲ ಘಟಕವು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ಜನ್ಮದಿನದ ಅಂಗವಾಗಿ
ಬಳ್ಳಾರಿಯ ತಾಳೂರು ರಸ್ತೆಯ ಗೋವಿಂದಪ್ಪ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ `ಸೇವಾ ಸಂಕಲ್ಪ ಅಭಿಯಾನ'ದಲ್ಲಿ ರಕ್ತದಾನ ಶಿಬಿರವನ್ನು ನಡೆಯಿತು.
ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಅವರು ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಉದ್ಘಾಟಿಸಿರು. ಕಾರ್ಪೊರೇಟರ್ ಶ್ರೀನಿವಾಸ ಮೋತ್ಕರ್ ಹಾಗೂ ಪದಾಧಿಕಾರಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್