
ಬಳ್ಳಾರಿ, 07 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2026-27ನೇ ಸಾಲಿನ ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ‘ದಸರಾ ಸಿ.ಎಂ. ಕಪ್ ಕ್ರೀಡಾಕೂಟ’ವನ್ನು ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 18 ರವರೆಗೆ ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
*ತಾಲೂಕುವಾರು ಕ್ರೀಡಾಕೂಟದ ದಿನಾಂಕ ಮತ್ತು ಸ್ಥಳದ ವಿವರ:*
ಸಂಡೂರು ತಾಲೂಕು: ಸೆ.11 ರಂದು ಬೆಳಿಗ್ಗೆ 10.30 ಗಂಟೆಗೆ ಜೆ.ಎಸ್.ಡಬ್ಲ್ಯೂ ಆದರ್ಶ ವಿದ್ಯಾಲಯ, ತೋರಣಗಲ್ಲು.
ಕುರುಗೋಡು ತಾಲೂಕು: ಸೆ.15 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಕ್ರೀಡಾಂಗಣ, ಬಳ್ಳಾರಿ.
ಕಂಪ್ಲಿ ತಾಲೂಕು: ಸೆ.16 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಕ್ರೀಡಾಂಗಣ, ಬಳ್ಳಾರಿ.
ಬಳ್ಳಾರಿ ತಾಲೂಕು: ಸೆ.17 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಕ್ರೀಡಾಂಗಣ, ಬಳ್ಳಾರಿ.
ಸಿರುಗುಪ್ಪ ತಾಲೂಕು: ಸೆ.18 ರಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕು ಕ್ರೀಡಾಂಗಣ, ಸಿರುಗುಪ್ಪ.
*ನಡೆಯಲಿರುವ ಕ್ರೀಡೆಗಳು:*
ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಬಾಲ್ (ಪುರುಷರಿಗೆ ಮಾತ್ರ), ಥ್ರೋಬಾಲ್, ಯೋಗ.
*ಕ್ರೀಡಾಪಟುಗಳಿಗೆ ಪ್ರಮುಖ ಮಾರ್ಗಸೂಚಿಗಳು:*
ತಾಲೂಕು ದಸರಾ ಸ್ಪರ್ಧೆಗಳಲ್ಲಿ ಆಯಾ ತಾಲೂಕಿನ ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅವಕಾಶವಿದ್ದು, ಬೇರೆ ತಾಲೂಕು ಅಥವಾ ಜಿಲ್ಲೆಯವರಿಗೆ ಪ್ರವೇಶವಿರುವುದಿಲ್ಲ.
ಕ್ರೀಡಾಪಟುಗಳು ತಾವು ಪ್ರತಿನಿಧಿಸುವ ತಾಲೂಕಿನ ದೃಢೀಕರಣಕ್ಕಾಗಿ ಶಾಲಾ/ಕಾಲೇಜಿನ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಅಥವಾ ಸರ್ಕಾರದ ಅಧಿಕೃತ ಗುರುತಿನ ಚೀಟಿಯೊಂದಿಗೆ ನೋಂದಣಿ ಸಮಯದಲ್ಲಿ ಹಾಜರಾಗುವುದು ಕಡ್ಡಾಯ.
ಭಾಗವಹಿಸುವ ಕ್ರೀಡಾಪಟುಗಳು ‘Dasara CM Cup 2026’ ಅಧಿಕೃತ ವೆಬ್ಸೈಟ್ (https://dasaracmcup.in) ಅಥವಾ ಕ್ಯೂಆರ್ ಕೋಡ್ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡದವರಿಗೆ ಭಾಗವಹಿಸಲು ಅವಕಾಶವಿರುವುದಿಲ್ಲ.
ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯುತ್ತವೆ. ಕರ್ನಾಟಕ ರಾಜ್ಯದ ನಿವಾಸಿಗಳಿಗೆ ಮಾತ್ರ ಅವಕಾಶ. ರಕ್ಷಣಾ ಪಡೆ ಹಾಗೂ ಅರೆ ರಕ್ಷಣಾ ಪಡೆಗಳ ಕ್ರೀಡಾಪಟುಗಳಿಗೆ ಭಾಗವಹಿಸಲು ಅವಕಾಶವಿರುವುದಿಲ್ಲ.
ಕ್ರೀಡಾಪಟುಗಳಿಗೆ ಯಾವುದೇ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಒಬ್ಬ ಕ್ರೀಡಾಪಟು ಕೇವಲ ಒಂದು ಗುಂಪು ಕ್ರೀಡೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಅಧಿಕಾರಿಗಳಾದ ಎಂ. ಜಾಕೀರ್ – 9036335986, ಮಹ್ಮದ್ ಮಸೂದ್ – 9886688858, ರತಿಕಾಂತ್ (ಕಚೇರಿ ಸಿಬ್ಬಂದಿ) – 8971238689, ಸಹಾಯವಾಣಿ ಸಂಖ್ಯೆ: 155265 ಇವರನ್ನು ಸಂಪರ್ಕಿಸಬಹುದಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್