ಜೂಜಾಟ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ
ಧಾರವಾಡ, 07 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನಗರದ ಜನತಾ ನಗರ, ಸ್ಲಂ ಬೋರ್ಡ್ ಸಮೀಪ ನಡೆಯುತ್ತಿದ್ದ ಜೂಜಾಟ ಅಡ್ಡೆ ಮೇಲೆ ವಿದ್ಯಾಗಿರಿ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ವಿದ್ಯಾಗಿರಿ ಪೊಲೀಸ್ ಠಾಣೆ ಪಿಐ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಜೂಜಾಟಕ್ಕೆ
ಪ್ರಕಟಣೆ


ಧಾರವಾಡ, 07 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ನಗರದ ಜನತಾ ನಗರ, ಸ್ಲಂ ಬೋರ್ಡ್ ಸಮೀಪ ನಡೆಯುತ್ತಿದ್ದ ಜೂಜಾಟ ಅಡ್ಡೆ ಮೇಲೆ ವಿದ್ಯಾಗಿರಿ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ವಿದ್ಯಾಗಿರಿ ಪೊಲೀಸ್ ಠಾಣೆ ಪಿಐ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಜೂಜಾಟಕ್ಕೆ ಬಳಸುತ್ತಿದ್ದ ₹12,030 ನಗದು ವಶಪಡಿಸಿಕೊಂಡಿದೆ.

ಬಂಧಿತರನ್ನು ಜಾಕೀರ್ ಕಿಲ್ಲೇದಾರ್, ಯಾಸಿನ್ ಜವಳಿ, ಅಲ್ತಾಫ್ ಟಿನ್ಸಾಲೆ ಹಾಗೂ ಸಾದಿಕ್ ಕಳ್ಳಿಮನಿ ಎಂದು ಗುರುತಿಸಲಾಗಿದೆ. ಈ ಕುರಿತು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೋಲಿಸ್ ಆಯುಕ್ತರ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಪಿಐ ನೇತೃತ್ವದಲ್ಲಿ ಅಶೋಕ್ ಮೂಡಶಿ, ಮೌನೇಶ್ ಚವಾಣ್, ಸದ್ದಾಂ ದೀಡಿ, ಅಮರ್ ನಾಸಲಾಪುರೆ ಹಾಗೂ ಅರುಣ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande