ಪ್ರಧಾನಮಂತ್ರಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ಇಂದು ದೇಶದಲ್ಲಿ ಚಂಡಮಾರತ ಸಂಬಂಧಿತ ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆ
2 ಡಿಸೆಂಬರ್(ಹಿ.ಸ): ಆ್ಯಂಕರ್ : ಪ್ರಧಾನಮಂತ್ರಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ಇಂದು ದೇಶದಲ್ಲಿ ಚಂಡಮಾರತ ಸಂಬಂಧಿತ ಪರ
ಝಥ


2 ಡಿಸೆಂಬರ್(ಹಿ.ಸ): ಆ್ಯಂಕರ್ :

ಪ್ರಧಾನಮಂತ್ರಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ಇಂದು ದೇಶದಲ್ಲಿ ಚಂಡಮಾರತ ಸಂಬಂಧಿತ ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆ ನಡೆಯಿತು. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮುಂದಿನ ೩೬ ತಾಸಿನಲ್ಲಿ ಜಾವದ್ ಹೆಸರಿನ ಚಂಡಮಾರುತವಾಗಿ ಬದಲಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಚಂಡಮಾರುತವು ವಾಯವ್ಯಾಭಿಮುಖವಾಗಿ ತೀವ್ರಗೊಳ್ಳಲಿದ್ದು, ಶನಿವಾರ ಬೆಳಿಗ್ಗೆ ಒಡಿಶಾ ಉತ್ತರ ಆಂಧ್ರಪ್ರದೇಶ-ಒಡಿಶಾ ಕರಾವಳಿ ತಲುಪುವ ಸಾಧ್ಯತೆ ಇದೆ.

ಹಿಂದೂಸ್ತಾನ್ ಸಮಾಚಾರ್


 rajesh pande