ರೌಡಿಸಂ ದೃಶ್ಯಕ್ಕೆ ಮಾದೇಶ್ವರನ ಹಾಡು; 'ಗರುಡ ಗಮನ..' ಬಗ್ಗೆ ಶಾಂತಮಲ್ಲಿಕಾರ್ಜುನ ಸ್ವಾಮಿ ಬಹಿರಂಗ ಪತ್ರ
3 ಡಿಸೆಂಬರ್(ಹಿ.ಸ):ಆ್ಯಂಕರ್ : ರಾಜ್ ಬಿ. ಶೆಟ್ಟಿ ನಿರ್ದೇಶನ ಮಾಡಿರುವ ‘ಗರುಡ ಗಮನ ವೃಷಭ ವಾಹನ’ ಚಿತ್ರ ಸೂಪರ್ ಹಿಟ್
ರೌಡಿಸಂ ದೃಶ್ಯಕ್ಕೆ ಮಾದೇಶ್ವರನ ಹಾಡು; 'ಗರುಡ ಗಮನ..' ಬಗ್ಗೆ ಶಾಂತಮಲ್ಲಿಕಾರ್ಜುನ ಸ್ವಾಮಿ ಬಹಿರಂಗ ಪತ್ರ


3 ಡಿಸೆಂಬರ್(ಹಿ.ಸ):ಆ್ಯಂಕರ್ :

ರಾಜ್ ಬಿ. ಶೆಟ್ಟಿ ನಿರ್ದೇಶನ ಮಾಡಿರುವ ‘ಗರುಡ ಗಮನ ವೃಷಭ ವಾಹನ’ ಚಿತ್ರ ಸೂಪರ್ ಹಿಟ್ ಆಗಿದೆ. ರಿಷಬ್ ಶೆಟ್ಟಿ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಿಧುನ್ ಮುಕುಂದನ್ ಅವರು ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳೆಲ್ಲವೂ ಹಿಟ್ ಆಗಿವೆ. ಹಿನ್ನೆಲೆ ಸಂಗೀತ ಕೂಡ ಗಮನ ಸೆಳೆದಿದೆ.

ಈ ಚಿತ್ರದಲ್ಲಿನ ‘ಸೋಜುಗಾದ ಸೂಜು ಮಲ್ಲಿಗೆ..’ ಗೀತೆಗೆ ಯೂಟ್ಯೂಬ್ನಲ್ಲಿ ಮಿಲಿಯನ್ಗಟ್ಟಲೆ ವೀವ್ಸ್ ಸಿಗುತ್ತಿದೆ. ಅದರ ಬೆನ್ನಲ್ಲೇ ಇನ್ನೊಂದು ಹಾಡು ‘ಚಂದ್ರಚೂಡ ಶಿವಶಂಕರ ಪಾರ್ವತಿ’ ಲಿರಿಕಲ್ ವಿಡಿಯೋ ಕೂಡ ಬಿಡುಗಡೆ ಆಗಿದೆ. ಆದರೆ ಸಿನಿಮಾದಲ್ಲಿ ರೌಡಿಸಂ, ಕೊಲೆ, ರಕ್ತಪಾತದ ಹಿನ್ನೆಲೆಯಲ್ಲಿ ಈ ಗೀತೆಗಳನ್ನು ಬಳಸಿರುವುದಕ್ಕೆ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಬಹಿರಂಗ ಪತ್ರ ಬರೆದಿದ್ದು, ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande