ಟೀಂ ಇಂಡಿಯಾ ತರಬೇತುದಾರ ಹುದ್ದೆಗೆ ಅನಿಲ್ ಕುಂಬ್ಳೆ, ವಿವಿಎಸ್ ಲಕ್ಷ್ಮಣ್ ಅರ್ಜಿ
ನವದೆಹಲಿ, 18 ಸೆಪ್ಟೆಂಬರ್ (ಹಿ.ಸ): ಮುಂಬರುವ ಟ್ವೆಂಟಿ-20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ಮುಖ್ಯ ತರಬೇತುದಾರ ರವಿಶಾಸ್
ಅನಿಲ್ ಕುಂಬ್ಳೆ, ವಿವಿಎಸ್ ಲಕ್ಷ್ಮಣ್ ಅರ್ಜಿ


ನವದೆಹಲಿ, 18 ಸೆಪ್ಟೆಂಬರ್ (ಹಿ.ಸ): ಮುಂಬರುವ ಟ್ವೆಂಟಿ-20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ಮುಖ್ಯ ತರಬೇತುದಾರ ರವಿಶಾಸ್ತ್ರಿ ಅವಧಿ ಮುಕ್ತಾಯವಾಗಲಿದೆ. ಈ ಹಿನ್ನೆಲೆ ವಿವಿಎಸ್ ಲಕ್ಷ್ಮಣ್ಗೆ ಭಾರತೀಯ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವಂತೆ ಬಿಸಿಸಿಐ ಕೇಳುವ ಸಾಧ್ಯತೆಯಿದೆ.

ಹೊಸ ಕೋಚ್ ಹುಡುಕಾಟದ ಪ್ರಕ್ರಿಯೆ ಪ್ರಾರಂಭಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ), ಮಾಜಿ ಆಟಗಾರರಾದ ಅನಿಲ್ ಕುಂಬ್ಳೆ ಹಾಗೂ ವಿವಿಎಸ್ ಲಕ್ಷ್ಮಣ್ ಅವರಲ್ಲಿ ಅರ್ಜಿ ಸಲ್ಲಿಸುವಂತೆ ಮನವಿ ಸಲ್ಲಿಸಲು ಮುಂದಾಗಿದೆ ಎಂಬ ಸುದ್ದಿ ಹೊರ ಬಿದ್ದಿದೆ.

2016-17ರ ನಡುವೆ ಒಂದು ವರ್ಷದ ಕಾಲ ಅನಿಲ್ ಕುಂಬ್ಳೆ ಭಾರತ ಕ್ರಿಕೆಟ್ ತಂಡದ ಕೋಚ್ ಹುದ್ದೆ ವಹಿಸಿದ್ದರು. ಆದರೆ, ನಾಯಕ ವಿರಾಟ್ ಕೊಹ್ಲಿ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಕೋಚ್ ಸ್ಥಾನವನ್ನು ತೊರೆದಿದ್ದರು.

ಈಗ ಸೌರವ್ ಗಂಗೂಲಿ ನೇತೃತ್ವದ ಬಿಸಿಸಿಐ, ಮತ್ತೊಮ್ಮೆ ಅನಿಲ್ ಕುಂಬ್ಳೆ ಅವರತ್ತ ಮುಖ ಮಾಡುವ ಸಾಧ್ಯತೆಯಿದೆ. 2016 ರಲ್ಲಿ ಸೌರವ್ ಗಂಗೂಲಿ, ಸಚಿನ್ ತೆಂಡೂಲ್ಕರ್ ಹಾಗೂ ವಿವಿಎಸ್ ಲಕ್ಷ್ಮಣ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿಯು (ಸಿಎಸಿ), ಕುಂಬ್ಳೆ ಅವರನ್ನು ಕೋಚ್ ಸ್ಥಾನಕ್ಕೆ ಶಿಫಾರಸು ಮಾಡಿತ್ತು.

2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಕುಂಬ್ಳೆ ರಾಜೀನಾಮೆ ನೀಡಿದ್ದರು. ಐಪಿಎಲ್(IPL)ನಲ್ಲಿ ಪ್ರಸ್ತುತ ಪಂಜಾಬ್ ಕಿಂಗ್ಸ್ ತಂಡದ ನಿರ್ದೇಶಕರಾಗಿರುವ ಕುಂಬ್ಳೆ ಜತೆಗೆ ಬಿಸಿಸಿಐ, ಲಕ್ಷ್ಮಣ್ ಅವರನ್ನೂ ತರಬೇತುದಾರ ಹುದ್ದೆಗೆ ಅರ್ಜಿ ಸಲ್ಲಿಸುವಂತೆ ಸಂಪರ್ಕಿಸಬಹುದು ಎನ್ನಲಾಗಿದೆ.

ಅನಿಲ್ ಕುಂಬ್ಳೆ ನಿರ್ಗಮಿಸಿರುವ ರೀತಿ ಸರಿಯಾಗಿರಲಿಲ್ಲ. ವಿರಾಟ್ ಕೊಹ್ಲಿ ಒತ್ತಡಕ್ಕೆ ಸಿಒಎ ಮಣಿದಿರುವುದು ಮತ್ತು ಕೋಚ್ ಹುದ್ದೆ ತೊರೆಯುವಂತೆ ಒತ್ತಡ ಹೇರಿರುವುದು ಸರಿಯಾದ ಉದಾಹರಣೆಯಾಗಿರಲಿಲ್ಲ. ಆದರೂ, ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಕುಂಬ್ಳೆ ಅಥವಾ ಲಕ್ಷ್ಮಣ್ ಸಿದ್ಧರಾಗಿದ್ದಾರೆಯೇ ಎಂಬುದು ಇನ್ನೂ ತಿಳಿದು ಬಂದಿಲ್ಲ.

ಮುಂಬರುವ ಟ್ವೆಂಟಿ-20 ವಿಶ್ವಕಪ್ ಬಳಿಕ ಟಿ-20 ನಾಯಕತ್ವ ಸ್ಥಾನ ತೊರೆಯುವುದಾಗಿ ವಿರಾಟ್ ಕೊಹ್ಲಿ ಪ್ರಕಟಿಸಿದ್ದಾರೆ. ಇನ್ನೊಂದೆಡೆ ಮುಖ್ಯ ತರಬೇತುದಾರನ ಸ್ಥಾನದಲ್ಲಿ ರವಿಶಾಸ್ತ್ರಿ ಮುಂದುವರಿಯುವ ಸಾಧ್ಯತೆ ಕಡಿಮೆಯಿದೆ.

ಹಿಂದೂಸ್ತಾನ್ ಸಮಾಚಾರ್.ಎಂ.ಎಸ್.ಯ.ಮ


 rajesh pande