ಬೆಂಗಳೂರು, 27 ನವೆಂಬರ್ (ಹಿ.ಸ):
ಆ್ಯಂಕರ್:
ಬೆಂಗಳೂರಿನ ಜಯನಗರದಲ್ಲಿ ವಿಷ್ಣುವರ್ಧನ್ ಅವರ ಹೊಸ ಮನೆ ನಿರ್ಮಾಣ ಮಾಡಲಾಗಿದೆ. ಇಂದು (ನ.27) ಗೃಹಪ್ರವೇಶ ಸಮಾರಂಭ ನೆರವೇರಿಸಲಾಗಿದೆ. ಈ ಶುಭ ಗಳಿಗೆಗೆ ಅನೇಕ ಗಣ್ಯರು ಸಾಕ್ಷಿ ಆಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಕೂಡ ಆಗಮಿಸಿ ಗೃಹಪ್ರವೇಶದಲ್ಲಿ ಪಾಲ್ಗೊಂಡರು. ರಾಜಕೀಯದ ಕಾರ್ಯಗಳ ನಡುವೆಯೂ ಬಿಡುವು ಮಾಡಿಕೊಂಡು ಬಂದ ಅವರನ್ನು ನಟ ಅನಿರುದ್ಧ್ ಆತ್ಮೀಯವಾಗಿ ಬರಮಾಡಿಕೊಂಡರು. ಈ ಹೊಸ ಮನೆಗೆ ‘ವಲ್ಮೀಕ’ ಎಂದು ಹೆಸರು ಇಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್