ಬೆಂಗಳೂರು, 29ಜನವರಿ(ಹಿ.ಸ):
ಆ್ಯಂಕರ್ :
ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಾವಲ್ಭೈರಸಂಧ್ರದ ನಿವಾಸದಲ್ಲಿ ಮನ್ದೀಪ್ ಮೃತಪಟ್ಟಿದ್ದಾರೆ. ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು, ಬೆಳಗ್ಗೆ 11 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಈ ಕುರಿತು ಮನ್ದೀಪ್ ಪುತ್ರಿ ಅಕ್ಷತಾ ಮಾಹಿತಿ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್