ಗೊಂದಲಕ್ಕೆ ತೆರೆ- ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ
ಬೆಂಗಳೂರು,25 ಮಾರ್ಚ್ (ಹಿ.ಸ): ಆ್ಯಂಕರ್: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಮೊದಲ ಪಟ್ಟಿ ಬಿಡ
ೇೇೇ


ಬೆಂಗಳೂರು,25 ಮಾರ್ಚ್ (ಹಿ.ಸ):

ಆ್ಯಂಕರ್: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು, ಕೊನೆಗೂ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾದಿಂದ ಸ್ಪರ್ಧಿಸುವುದು ಖಚಿತವಾಗಿದೆ.

ರಾಜ್ಯ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಗೊಂಡಿದೆ. ಈ ಮೊದಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಆದರೆ ಹೈಕಮಾಂಡ್ ನಾಯಕರ ಸೂಚನೆ ಬೆನ್ನಲ್ಲೇ ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎನ್ನುವುದು ಗೊಂದಲಕ್ಕೀಡಾಗಿತ್ತು.

ಹಿಂದೂಸ್ತಾನ್ ಸಮಾಚಾರ್


 rajesh pande