ನವದೆಹಲಿ,4 ಜೂನ್ (ಹಿ.ಸ):
ಆ್ಯಂಕರ್ :
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದಿನಿಂದ ಇದೇ ೯ರವರೆಗೆ ಸುರಿನಾಮೆ ಮತ್ತು ಸರ್ಬಿಯಾ ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ. ರಾಷ್ಟ್ರಪತಿ ಅವರು ತಮ್ಮ ಪ್ರವಾಸದ ಮೊದಲ ಚರಣದಲ್ಲಿ ಸುರಿನಾಮೆಗೆ ಇಂದು ಪ್ರಯಾಣ ಬೆಳೆಸಲಿದ್ದಾರೆ. ಇದೇ ೬ರವರೆಗೆ ಸುರಿನಾಮೆಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಸುರಿನಾಮೆಗೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಉನ್ನತ ಮಟ್ಟದ ನಿಯೋಗದ ಸಭೆಯಲ್ಲಿ ದ್ರೌಪದಿ ಮುರ್ಮು ಪಾಲ್ಗೊಳ್ಳಲಿದ್ದಾರೆ. ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪೂರ್ವ ವಲಯದ ಕಾರ್ಯದರ್ಶಿ ಸೌರಭ್ ಕುಮಾರ್ ತಿಳಿಸಿದ್ದಾರೆ. ಸುರಿನಾಮ್ ಗಣರಾಜ್ಯದ ಅಧ್ಯಕ್ಷ ಚಂದ್ರಿಕಾಪರ್ಸಾದ್ ಸಂತೋಖಿ ಅವರ ಆಹ್ವಾನದ ಮೇರೆಗೆ ರಾಷ್ಟ್ರಪತಿ ಈ ಪ್ರವಾಸ ಕೈಗೊಂಡಿದ್ದಾರೆ. ಸುರಿನಾಮ್ಗೆ ಭಾರತೀಯರ ಆಗಮನದ ೧೫೦ನೇ ವಾರ್ಷಿಕೋತ್ಸವದ ಆಚರಣೆಯಲ್ಲಿ ದ್ರೌಪದಿ ಮುರ್ಮು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ನಿಯೋಗದಲ್ಲಿ ಸಾಧ್ವಿ ನಿರಂಜನ್ ಜ್ಯೋತಿ ಮತ್ತು ರಮಾದೇವಿ ಇದ್ದಾರೆ. ತಮ್ಮ ಭೇಟಿಯ ಸಂದರ್ಭದಲ್ಲಿ ದ್ರೌಪದಿ ಮುರ್ಮು ಭಾರತೀಯ ಸಮುದಾಯದವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಪ್ರವಾಸದ ಎರಡನೇ ಚರಣದಲ್ಲಿ ಸರ್ಬಿಯಾ ದೇಶಕ್ಕೆ ಭೇಟಿ ನೀಡಿ ದ್ವಿಪಕ್ಷೀಯ ಸಹಕಾರ ಸಂಬಂಧಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಅಧ್ಯಕ್ಷ ಅಲೆಕ್ಸಾಂಡರ್ ವುಸಿಕ್ ಅವರ ಆಹ್ವಾನದ ಮೇರೆಗೆ ಜೂನ್ ೭ ರಿಂದ ೯ ರವರೆಗೆ ಸರ್ಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಇದು ಉಭಯ ದೇಶಗಳ ನಡುವೆ ರಾಷ್ಟ್ರದ ಮುಖ್ಯಸ್ಥರ ಮೊದಲ ರಾಜ್ಯ ಭೇಟಿಯಾಗಿದೆ. ಮುಕ್ತ ವ್ಯಾಪಾರ ಅವಕಾಶಗಳ ಸಾಧ್ಯತೆಗಳು ಮತ್ತು ನಿರೀಕ್ಷೆಗಳನ್ನು ಅನ್ವೇಷಿಸಲು ಎರಡೂ ದೇಶಗಳ ವ್ಯಾಪಾರ ಸಮುದಾಯಗಳನ್ನು ಪ್ರೋತ್ಸಾಹಿಸುವುದರ ಮೇಲೆ ಈ ಭೇಟಿ ಹೆಚ್ಚು ಕೇಂದ್ರೀಕರಿಸುತ್ತದೆ.
ಹಿಂದೂಸ್ತಾನ್ ಸಮಾಚಾರ್