ದೆಹಲಿ, 9ಜೂನ್ (ಹಿ.ಸ):
ಆ್ಯಂಕರ್:
ಬಿಪರ್ ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಾಗಲಿದೆ. ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಹಿಂದೂಸ್ತಾನ್ ಸಮಾಚಾರ್